ADVERTISEMENT

ಸಿದ್ದರಾಮಯ್ಯ ಕೀಳು ರಾಜಕೀಯ ಸಿ.ಟಿ. ರವಿ ಟೀಕೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2020, 21:10 IST
Last Updated 22 ಅಕ್ಟೋಬರ್ 2020, 21:10 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಬಗ್ಗೆ ಕೀಳಾಗಿ ಮಾತನಾಡಿರುವುದು ದುರಾದೃಷ್ಟಕರ ಮತ್ತು ಕೀಳು ಮಟ್ಟದ ರಾಜಕೀಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಮೂಲೆ ಗುಂಪಾಗುತ್ತಿರುವ ನೋವನ್ನು ತೋಡಿಕೊಳ್ಳುವ ಬೇರೆ ದಾರಿ ಇಲ್ಲದೆ ಕೀಳು ಮಟ್ಟದ ಟೀಕೆಗೆ ಇಳಿದಿದ್ದಾರೆ ಎಂದು ರವಿ ಅವರು ಟ್ವೀಟ್‌ ಮಾಡಿದ್ದಾರೆ.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತಿದ್ದೇವೆ. ನೀವು ಮೊದಲು ನಿಮ್ಮ ಮನೆಯ ಯಜಮಾನ ಯಾರು ಎನ್ನುವುದನ್ನು ನಿರ್ಧಾರ ಮಾಡಿಕೊಳ್ಳಿ. ಮನೆಯೊಂದು ನೂರು ಬಾಗಿಲು ಎಂಬಂತೆ ಇರುವ ನಿಮ್ಮ ಪಕ್ಷವನ್ನು, ಪಕ್ಷದಲ್ಲಿ ನಿಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಿ’ ಎಂದು ಲೇವಡಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.