ADVERTISEMENT

ಸಂಸತ್ ರೂಪಿಸಿದ ಕಾನೂನು ತಡೆ ಅಸಾಧ್ಯ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 12:10 IST
Last Updated 13 ಜನವರಿ 2021, 12:10 IST
ಸಿ.ಟಿ.ರವಿ
ಸಿ.ಟಿ.ರವಿ   

ಶಿವಮೊಗ್ಗ: ಕೃಷಿ ಕಾಯ್ದೆಗಳಿಗೆ ತಡೆ ನೀಡಿರುವ ಸುಪ್ರೀಂಕೋರ್ಟ್‌ ಮಧ್ಯಂತರ ಆದೇಶ ಸ್ವಾಗತಾರ್ಹ. ಆದರೆ, ಸಂಸತ್‌ ರೂಪಿಸಿದ ಕಾನೂನು ತಡೆಯುವ ಶಕ್ತಿ ನ್ಯಾಯಾಲಯಕ್ಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ರೈತರ ಹೋರಾಟದ ಅಂಶಗಳನ್ನು ಉಲ್ಲೇಖಿಸಿ ಕೋರ್ಟ್‌ ತಡೆ ನೀಡಿದೆ. ಯಾವ ಅಂಶಗಳು ರೈತ ವಿರೋಧಿಯಾಗಿವೆ? ಕಾಯ್ದೆಗಳಲ್ಲಿ ಸಂವಿಧಾನ ವಿರೋಧಿ ಅಂಶಗಳಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ರೈತರಿಗೆ ಹಾಕಿದ್ದ ಬೇಡಿಯನ್ನು ಹೊಸ ಕಾಯ್ದೆಗಳ ಮೂಲಕ ತೆಗೆಯಲು ಪ್ರಧಾನಿ ನಿರ್ಧರಿಸಿದ್ದಾರೆ. ಸುಧಾರಣೆ ತಡೆಯಲು ಕೆಲವರು ಬಯಸಿದ್ದಾರೆ. ಅವರ ಪ್ರಯತ್ನಗಳಿಗೆ ಯಶಸ್ಸು ಸಿಗುವುದಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.