ADVERTISEMENT

ಬೆಂಗಳೂರಿಗೆ ದೌಡಾಯಿಸಿದ ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 9:07 IST
Last Updated 6 ಜುಲೈ 2019, 9:07 IST
   

ರಾಮನಗರ: ಶಾಸಕರ ರಾಜೀನಾಮೆ ಸುದ್ದಿ ತಿಳಿಯುತ್ತಲೇ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಶನಿವಾರ ನಡೆಯಬೇಕಿದ್ದ ಜನಸಂಪರ್ಕ ಸಭೆ ರದ್ದು ಮಾಡಿ ಕನಕಪುರದಿಂದ ಬೆಂಗಳೂರಿಗೆ ದೌಡಾಯಿಸಿದರು.

ಈ ಸಂದರ್ಭ ಪತ್ರಕರ್ತರ ಜೊತೆ‌ ಮಾತನಾಡಿದ ಅವರು 'ಸರ್ಕಾರ ಉಳಿಸಿಕೊಳ್ಳಲು ನಾವು ಸಿದ್ದರಿದ್ದೇವೆ. ಅಗತ್ಯ ಬಿದ್ದಲ್ಲಿ ಕೆಲವರು ಸಚಿವ ಸ್ಥಾನವನ್ನೂ ತ್ಯಾಗ ಮಾಡುತ್ತಾರೆ' ಎಂದು ಹೇಳಿದರು.

'ಇಂದು ಸಂಜೆ ಬೆಂಗಳೂರಿನಲ್ಲಿ ನಮ್ಮ ಶಾಸಕರು, ಸಚಿವರ ಜೊತೆ ಸಭೆ ನಡೆಸುತ್ತೇವೆ. ಬಿಜೆಪಿಯ ಕೆಲವರು ಸರ್ಕಾರ ಉರುಳಿಸಲು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.