ಬೆಂಗಳೂರು: ಮೈಸೂರಿನ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸೋಮವಾರ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಕ್ರೆಸೆಂಟ್ ರಸ್ತೆಯಲ್ಲಿರುವ ಸಚಿವರ ಸರ್ಕಾರಿ ನಿವಾಸಕ್ಕೆ ಸಂಜೆ ಭೇಟಿ ನೀಡಿದ ಶ್ರೀಗಳು, ಸುಮಾರು ಒಂದು ಗಂಟೆ ಚರ್ಚೆ ನಡೆಸಿದರು.
ಕಳೆದ ಒಂದು ವಾರದಿಂದ ಜ್ವರ, ವಾಂತಿ, ಬೇಧಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಅನೇಕ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.
‘ಇದು ಕೇವಲ ಸೌಹಾರ್ದಯುತ ಭೇಟಿ. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಷಯ ಚರ್ಚೆ ಆಗಿಲ್ಲ’ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.