ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಯುವ ಸಾಹಿತ್ಯ ಪ್ರಶಸ್ತಿಗೆ ವಿಜಯ ನಗರಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್, ಬಾಲ ಸಾಹಿತ್ಯ ಪ್ರಶಸ್ತಿಗೆ ಶಿರಸಿಸಿದ್ದಾಪುರದ ತಮ್ಮಣ್ಣ ಬೀಗಾರ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪುರಸ್ಕೃತರು ತಲಾ ₹50 ಸಾವಿರ ನಗದು ಹಾಗೂ ಸನ್ಮಾನ ಪತ್ರ ಪಡೆಯಲಿದ್ದಾರೆ. ದಾದಾಪೀರ್ ಅವರ ‘ನೀಲಕುರಿಂಜಿ’ ಕಥಾಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಮತ್ತು ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.