ADVERTISEMENT

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಜನಾರ್ದನ ಪೂಜಾರಿ ಟಿಕೆಟ್ ಆಕಾಂಕ್ಷಿ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 20:18 IST
Last Updated 14 ಮಾರ್ಚ್ 2019, 20:18 IST
ಜನಾರ್ದನ ಪೂಜಾರಿ
ಜನಾರ್ದನ ಪೂಜಾರಿ   

ಮಂಗಳೂರು: ‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ಗೆ ನಾನೂ ಆಕಾಂಕ್ಷಿಯಾಗಿದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ತೆರಳಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಲಿದ್ದೇನೆ’ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಜನಾರ್ದನ ಪೂಜಾರಿ ಹೇಳಿದರು.

‘ಕ್ಷೇತ್ರದಲ್ಲಿ 4–5 ಲಕ್ಷ ಬಿಲ್ಲವರಿದ್ದಾರೆ. ಬಿಲ್ಲವರ ಕೋಟಾದಲ್ಲಿ ವಿನಯಕುಮಾರ್ ಸೊರಕೆ, ಬಿ.ಕೆ. ಹರಿಪ್ರಸಾದ್‌ ಆಕಾಂಕ್ಷಿಗಳಾಗಿದ್ದಾರೆ. ಟಿಕೆಟ್‌ ಸಿಕ್ಕಲ್ಲಿ ನಾನು ಸ್ಪರ್ಧಿಸುವುದು ಖಚಿತ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT