ಬೆಂಗಳೂರು: ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರವ್ಯವಹಾರ, ಪ್ರಮಾಣ ಪತ್ರಗಳಲ್ಲಿ `ದಲಿತ’ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ಉಪಮುಖ್ಯಮಂತ್ರಿಗೋವಿಂದಕಾರಜೋಳ ಅವರು ತಿಳಿಸಿದ್ದಾರೆ.
ಹರಿಜನ ಮತ್ತು ಗಿರಿಜನ ಎನ್ನುವ ಪದವನ್ನು ಬಳಕೆ ಮಾಡಬಾರದು. ಆಂಗ್ಲ ಭಾಷೆಯಲ್ಲಿ ಎಸ್ಸಿ/ ಎಸ್ಟಿ ಎಂದು ನಮೂದಿಸಬಹುದಾಗಿದ್ದು, ಇತರೇ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದವನ್ನು ಬಳಸಬೇಕು.
ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಎಂದು ನಮೂದಿಸಬಹುದಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.