ADVERTISEMENT

ದಲಿತರು ಮುಖ್ಯಮಂತ್ರಿಯಾಗಬಾರದೇ? ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2023, 13:52 IST
Last Updated 5 ನವೆಂಬರ್ 2023, 13:52 IST
<div class="paragraphs"><p>ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ</p></div>

ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

   

ಬಾಗಲಕೋಟೆ: ದಲಿತರು ಮತ ಬ್ಯಾಂಕ್‌ ಮಾತ್ರ ಆಗಿರಬೇಕೇ? ದಲಿತರು ಮುಖ್ಯಮಂತ್ರಿ ಆಗಬಾರದೇ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪ್ರಶ್ನಿಸಿದರು.

ಬಾಗಲಕೋಟೆಯ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯ ಹುದ್ದೆ ಕೇವಲ ಕೆಲವರ ಸ್ವತ್ತಾ? ಅದನ್ನು ಗುತ್ತಿಗೆ ಹಿಡಿದುಕೊಂಡಿದ್ದಾರಾ? ದಲಿತರು ಮುಖ್ಯಮಂತ್ರಿ ಆಗಲಿ ಎನ್ನುವ ಔದಾರ್ಯ ಇಲ್ಲದಿದ್ದರೆ ಹೇಗೆ? ಎಂದು ಕೇಳಿದರು.

ADVERTISEMENT

ಸತೀಶ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ನಿಮ್ಮ ಜತೆಗೆ ನಾವೆಲ್ಲರೂ ನಿಲ್ಲುತ್ತೇವೆ. ಅವಕಾಶ, ಸಮಯ ಕೂಡಿಬರಬೇಕಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.