ಮಾಲೂರು: ಪಟ್ಟಣದಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಹಲವು ಕಡೆ ಗಣೇಶ ಮೂರ್ತಿಗಳನ್ನು ಕೆಡವಿ, ಫ್ಲೆಕ್ಸ್ ಬೋರ್ಡ್ಗಳನ್ನು ಹರಿದು ಹಾಕಿದ್ದಾರೆ.
ಕುಂಬಾರಪೇಟೆ ವ್ಯಾಪ್ತಿಯಲ್ಲಿ ನಾಲ್ಕು ಗಣಪತಿ ಮೂರ್ತಿಗಳು, ಬಾಬುರಾವ್ ಬೀದಿ, ಕುಪ್ಪಶೆಟ್ಟಿ ಬಾವಿ ಬಳಿ, ಧರ್ಮರಾಯಸ್ವಾಮಿ ದೇವಸ್ಥಾನ, ಗಾಂಧಿ ಸರ್ಕಲ್ ಬಳಿ ಗಣಪತಿ ಮೂರ್ತಿಗಳನ್ನು ವಿರೂಪಗೊಳಿಸಲಾಗಿದೆ.
ಪಟ್ಟಣದ ಮಲ್ಲೇಶ್ (25), ಕಾಂತರಾಜು (30), ಗಿರೀಶ್ (24), ಪುನೀತ್ (25), ಚಂದು (21) ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.