ADVERTISEMENT

ದಸರಾ ಛಾಯಾಚಿತ್ರ ಸ್ಪರ್ಧೆ; ₹ 1 ಲಕ್ಷ ಬಹುಮಾನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 14:20 IST
Last Updated 3 ಅಕ್ಟೋಬರ್ 2019, 14:20 IST
   

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಇದೇ ಮೊದಲ ಬಾರಿಗೆ ‘ದಸರಾ ಛಾಯಾಚಿತ್ರ ಸ್ಪರ್ಧೆ’ ಆಯೋಜಿಸಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು.

ಅತ್ಯುತ್ತಮ ಛಾಯಾಚಿತ್ರವೊಂದಕ್ಕೆ ₹ 1ಲಕ್ಷ ಬಹುಮಾನ ನೀಡುತ್ತಿದ್ದು, ಆಸಕ್ತರು ಈ ಬಾರಿಯ ದಸರಾ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಕಳುಹಿಸಿಕೊಡಬೇಕು ಎಂದು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಒಬ್ಬರು ಮೂರು ಛಾಯಾಚಿತ್ರಗಳನ್ನು ಕೊಡಬಹುದು. ಅರ್ಜಿಗಳನ್ನು www.mysoredasara.gov.inನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಹೋಟೆಲ್ ಮಯೂರ ಹೊಯ್ಸಳ, ಜೆ.ಎಲ್.ಬಿ ರಸ್ತೆ, ಮೈಸೂರು ಇಲ್ಲಿಗೆ ಅ.14ರ ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.