ADVERTISEMENT

ಶ್ರೀರಾಮಸೇನೆಯಿಂದ ಇಂದು ದತ್ತಮಾಲಾ ಅಭಿಯಾನ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2018, 20:25 IST
Last Updated 27 ಅಕ್ಟೋಬರ್ 2018, 20:25 IST

ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ಜರುಗುವ ದತ್ತಮಾಲಾ ಅಭಿಯಾನದ ಅಂಗವಾಗಿ ಶೋಭಾಯಾತ್ರೆ ಭಾನುವಾರ ನಡೆಯಲಿದೆ. ಶಾಂತಿ–ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತ ಸಜ್ಜಾಗಿದೆ.

ಬೆಳಿಗ್ಗೆ 9 ಗಂಟೆಗೆ ನಗರದ ಬಸವನಹಳ್ಳಿ ಮುಖ್ಯರಸ್ತೆಯ ಶಂಕರಮಠದಿಂದ ಶೋಭಾಯಾತ್ರೆ ಹೊರಡಲಿದೆ. ಹನುಮಂತಪ್ಪ ವೃತ್ತ, ಎಂ.ಜಿ.ರಸ್ತೆ ಮೂಲಕ ಹಾದು ಬೋಳರಾಮೇಶ್ವರ ದೇಗುಲ ಆವರಣ ತಲುಪಲಿದೆ. ಅಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಸ್ವಾಮೀಜಿಗಳು, ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಮುಖಂಡರು, ದತ್ತ ಭಕ್ತರು ಪಾಲ್ಗೊಳ್ಳುವರು. ಸಭೆ ನಂತರ ದತ್ತಪೀಠಕ್ಕೆ ತೆರಳುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT