ADVERTISEMENT

ಕಾರು ಅಡ್ಡಗಟ್ಟಿ ₹60 ಲಕ್ಷ ಮೌಲ್ಯದ ಬೆಳ್ಳಿ ಲೂಟಿ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2018, 20:09 IST
Last Updated 30 ಡಿಸೆಂಬರ್ 2018, 20:09 IST
   

ದಾವಣಗೆರೆ: ತಾಲ್ಲೂಕಿನ ಹೆಬ್ಬಾಳ ಟೋಲ್‌ ನಾಕಾ ಬಳಿ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗಿನ ಜಾವ ಬೆಳ್ಳಿ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ಐವರು ದುಷ್ಕರ್ಮಿಗಳು ₹ 60 ಲಕ್ಷ ಮೌಲ್ಯದ ಬೆಳ್ಳಿ ದೋಚಿದ್ದಾರೆ.

ತಮಿಳುನಾಡಿನ ಸೇಲಂನ ಬೆಳ್ಳಿ ವ್ಯಾಪಾರಿ ಜಗನ್ನಾಥ ಖಾಂಡೇಕರ್‌ ಅವರು ತಮ್ಮ ಸ್ನೇಹಿತ ಪಾಂಡುರಂಗ ಮಾಲಿ ಜೊತೆಗೆ 300 ಕೆ.ಜಿ. ಕಚ್ಚಾ, ಪಕ್ಕಾ ಬೆಳ್ಳಿ ಮತ್ತು ಕಾಲು ಚೈನ್‌ ಸಾಮಗ್ರಿಗಳನ್ನು ಮಹಾರಾಷ್ಟ್ರದ ಕೊಲ್ಲಾಪುರದಿಂದ ಚೆನ್ನೈಗೆ ಶುಕ್ರವಾರ ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದರು.

‘ತನಿಖೆಗೆ ಎರಡು ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.