ADVERTISEMENT

ಕೋವಿಡ್‌: ಡಿಸಿಎಂ ಗೋವಿಂದ ಕಾರಜೋಳ ಪುತ್ರನ ಸ್ಥಿತಿ ಗಂಭೀರ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 10:51 IST
Last Updated 18 ಅಕ್ಟೋಬರ್ 2020, 10:51 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಬೆಂಗಳೂರು: ಉಪಮುಖ್ಯಮಂತ್ರಿಯೂ ಆಗಿರುವ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ, ಕೋವಿಡ್‌ನಿಂದ ಬಳಲುತ್ತಿರುವ ಡಾ. ಗೋಪಾಲ್ ಕಾರಜೋಳ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಮಧ್ಯಾಹ್ನ ಹೈದರಾಬಾದ್‌ನ ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕೋವಿಡ್‌ ದೃಢಪಟ್ಟ ಕಾರಣ ಗೋಪಾಲ್‌ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕಳೆದ 24 ದಿನಗಳಿಂದ ವೆಂಟಿಲೇಟ್‌ರ್‌ನಲ್ಲಿದ್ದ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ, ವೈದ್ಯರ ಸಲಹೆಯಂತೆ ಚೆನ್ನೈನ ಆಸ್ಪತ್ರೆಗೆ ಕರೆದೊಯ್ಯಲು ಮೊದಲು ತೀರ್ಮಾನಿಸಲಾಗಿತ್ತು. ಬಳಿಕ, ಹೈದರಾಬಾದ್‌ಗೆ ಕರೆದುಕೊಂಡು ಹೋಗಲು ತೀರ್ಮಾನಿಸಲಾಯಿತು ಎಂದು ಗೊತ್ತಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.