ADVERTISEMENT

ಹಂಪಿ ಉತ್ಸವದ ಬಗ್ಗೆ ಇನ್ನಷ್ಟೇ ತೀರ್ಮಾನ ಮಾಡಬೇಕಿದೆ: ಆನಂದ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2020, 17:17 IST
Last Updated 16 ಅಕ್ಟೋಬರ್ 2020, 17:17 IST
   

ಹೊಸಪೇಟೆ: ‘ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ನಂತರವಷ್ಟೇ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ತಿಳಿಸಿದರು.

‘ಮೈಸೂರು ದಸರಾ ಆಚರಿಸಲಾಗುತ್ತಿದೆ. ಹೀಗಿರುವಾಗ ಹಂಪಿ ಉತ್ಸವವೇಕೇ ಮಾಡಬಾರದು ಎಂಬ ಪ್ರಶ್ನೆಗಳನ್ನು ಕೆಲವರು ಕೇಳಿದ್ದಾರೆ.

ಅಲ್ಲದೇ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅದ್ದೂರಿ ಉತ್ಸವ ಮಾಡಲು ಬರುವುದಿಲ್ಲ. ಒಂದುವೇಳೆ ಉತ್ಸವ ಮಾಡುವುದರ ಬಗ್ಗೆ ತೀರ್ಮಾನಕ್ಕೆ ಬಂದರೆ ಸರಳ ರೀತಿಯಲ್ಲಿ ಆಚರಿಸಲಾಗುವುದು’ ಎಂದು ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.