ದಾವಣಗೆರೆ: ಹಲವು ಸಮುದಾಯದ ಸ್ವಾಮಿಜಿಗಳು ಮೀಸಲಾತಿ ಬಗ್ಗೆ ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನ್ಯಾಮತಿ ತಾಲ್ಲೂಕಿನ ಸುರಗೊಂಡನಕೊಪ್ಪದಲ್ಲಿ ಭಾನುವಾರ ನಡೆದ ಸಂತ ಸೇವಾಲಾಲ್ ಜಯಂತ್ಯುತ್ಸವಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿ ಹಲವು ಸಮುದಾಯದ ಸ್ವಾಮೀಜಿಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಯಾವ ರೀತಿ ಸೌಲಭ್ಯ ಕೊಡಬಹುದು ಎಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸ್ವಾಮೀಜಿಗಳು ಯಾವುದೇ ಸಂಶಯ ಇಟ್ಟುಕೊಳ್ಳುವುದು ಬೇಡ ಎಂದು ಯಡಿಯೂರಪ್ಪ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.