ADVERTISEMENT

ಕಂದಾಯ ಗ್ರಾಮ ಘೋಷಣೆಗೆ ಮೀನಮೇಷ: ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 19:31 IST
Last Updated 7 ಡಿಸೆಂಬರ್ 2020, 19:31 IST
ಕರ್ನಾಟಕ ವಿಧಾನಸಭೆ (ಪ್ರಾತಿನಿಧಿಕ ಚಿತ್ರ)
ಕರ್ನಾಟಕ ವಿಧಾನಸಭೆ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಕಂದಾಯ ಗ್ರಾಮಗಳ ಘೋಷಣೆಗೆ ಮೀನಮೇಷ ಎಣಿಸಲಾಗುತ್ತಿದೆ ಎಂದು ಬಿಜೆಪಿ ಸದಸ್ಯರೇ ವಿಧಾನಸಭೆಯಲ್ಲಿ ಸೋಮವಾರ ಆಕ್ಷೇಪವ್ಯಕ್ತಪಡಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೆ.ಬಿ.ಅಶೋಕ್‌ ನಾಯ್ಕ್‌ ಈ ಬಗ್ಗೆ ಪ್ರಶ್ನೆ ಕೇಳಿದರು.

ಕಂದಾಯ ಗ್ರಾಮಗಳನ್ನಾಗಿ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ವಿವಿಧ ಹಂತದಲ್ಲಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಉತ್ತರಿಸಿದರು.

ADVERTISEMENT

ಅಶೋಕ್‌ ನಾಯ್ಕ್‌, ’ರಾಜ್ಯದಲ್ಲಿ 57 ಸಾವಿರ ಜನವಸತಿ ಪ್ರದೇಶಗಳಿವೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ದಾಖಲೆಗಳಲ್ಲಿದೆ. 33 ಸಾವಿರ ಕಂದಾಯ ಗ್ರಾಮಗಳನ್ನು ಕಂದಾಯ ಇಲಾಖೆ ಘೋಷಣೆ ಮಾಡಿದೆ. ಉಳಿದ ಜನವಸತಿ ಪ್ರದೇಶಗಳನ್ನು ಸಹ ಕಂದಾಯ ಗ್ರಾಮಗಳಾಗಿ ಘೋಷಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.