ADVERTISEMENT

ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ನಿಗದಿಪಡಿಸಿದ ದೆಹಲಿ ಹೈಕೋರ್ಟ್

ಪ್ರತಿಕ್ರಿಯೆ ಕೋರಿ ಇ.ಡಿ.ಗೆ ನೋಟಿಸ್

ಏಜೆನ್ಸೀಸ್
Published 30 ಸೆಪ್ಟೆಂಬರ್ 2019, 6:08 IST
Last Updated 30 ಸೆಪ್ಟೆಂಬರ್ 2019, 6:08 IST
   

ನವದೆಹಲಿ:ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 14ಕ್ಕೆ ನಿಗದಿಪಡಿಸಿದೆ.

ಡಿಕೆಶಿ ಜಾಮೀನು ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್‌ ನೋಟಿಸ್ ನೀಡಿದೆ.

ಶಿವಕುಮಾರ್‌ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ವಿಶೇಷನ್ಯಾಯಾಲಯ ಸೆಪ್ಟೆಂರ್ 27ರಂದು ಆದೇಶ ನೀಡಿತ್ತು. ಇದರ ಸಿಂಧುತ್ವ ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.