ADVERTISEMENT

ಸಂಪುಟ ವಿಸ್ತರಣೆ| ದೆಹಲಿ ಭೇಟಿ ನಿಗದಿಯಾಗಿಲ್ಲ– ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 18:32 IST
Last Updated 8 ಸೆಪ್ಟೆಂಬರ್ 2020, 18:32 IST
   

ಬೆಂಗಳೂರು: ‘ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ವರಿಷ್ಠರ ಜೊತೆ ಮಾತುಕತೆ ನಡೆಸಲುದೆಹಲಿಯ ಭೇಟಿಗೆ ದಿನಾಂಕ ನಿಗದಿಯಾಗಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ದೆಹಲಿಗೆ ತೆರಳುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು’ ಎಂದರು.

‘ಪ್ರತಿಯೊಬ್ಬರು ಅಧಿವೇಶನಕ್ಕೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವಾಸ್ತವಿಕ ಸಂಗತಿಗಳನ್ನು ಮುಂದಿಡಲು ಸದನ ಉತ್ತಮ ಅವಕಾಶವಾಗಿದೆ. ಪೂರ್ವಭಾವಿ ಸಿದ್ದತೆ ಮಾಡಿಕೊಂಡು ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ’ ಎಂದುಯಡಿಯೂರಪ್ಪ ಹೇಳಿದರು.

ADVERTISEMENT

‘ಪ್ರವಾಹ ಸಮೀಕ್ಷೆಗೆ ಬಂದ ಕೇಂದ್ರದ ತಂಡಕ್ಕೆ ಎಲ್ಲ ಮಾಹಿತಿ ನೀಡಲಾಗಿದೆ. ಪ್ರವಾಹ ಹಾನಿ ಕುರಿತು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ಅವರು ಏನು ವರದಿ ಕೊಡುತ್ತಾರೆ ಎಂಬುದನ್ನು ನೋಡಿಕೊಂಡು ಹೆಚ್ಚಿನ ಪರಿಹಾರ ಕೇಳಲು ದೆಹಲಿಗೆ ಹೋಗುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.