ಹೊಸಪೇಟೆ: ಶಾಸಕ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಂಧಿಸಿ,ಕಾನೂನು ಕ್ರಮ ಜರುಗಿಸಬೇಕೆಂದು ಮಹಾರಾಣ ಪ್ರತಾಪ ರಜಪೂತ ಸಂಘ ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳು ಬುಧವಾರ ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದರು.
‘ವಿಜಯನಗರ ಕ್ಷೇತ್ರದಿಂದ ಮೂರು ಸಲ ಗೆದ್ದಿರುವ ಆನಂದ್ ಸಿಂಗ್ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಆವರ ಮೇಲೆ ಹಲ್ಲೆ ನಡೆಸಿರುವುದರಿಂದ ಅನೇಕ ಜನರಿಗೆ ನೋವಾಗಿದೆ. ಹಲ್ಲೆ ನಡೆಸಿರುವ ಗಣೇಶ್ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸಂಘದ ಅಧ್ಯಕ್ಷ ಆರ್. ಜಿತೇಂದ್ರ ಸಿಂಗ್, ಕಾರ್ಯದರ್ಶಿ ಜಯಸಿಂಗ್ ಮೂಲಿಮನಿ ಮನವಿಗೆ ಸಹಿ ಹಾಕಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.