ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ‘ಕೈ’ ಪಾಳಯದಲ್ಲಿ ಒತ್ತಾಯ ಹೆಚ್ಚುತ್ತಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಶನಿವಾರ ಬೆಳಿಗ್ಗೆ ಭೇಟಿ ಮಾಡಿದ ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಎಂ.ಬಿ. ಪಾಟೀಲ ಕೆಲಹೊತ್ತು ಚರ್ಚೆ ನಡೆಸಿದರು.
ಆದಷ್ಟು ಬೇಗ ಸಂಪುಟ ವಿಸ್ತರಿಸುವಂತೆ ಚರ್ಚೆ ವೇಳೆ ಆಗ್ರಹಿಸಿದ ಎಂ.ಬಿ. ಪಾಟೀಲ, ಇಲ್ಲದೇ ಇದ್ದಲ್ಲಿ ಮತ್ತೆ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದಾರೆ ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.