ADVERTISEMENT

ಸರ್ಕಾರಿ ನೇಮಕಾತಿ: ವಯೋಮಿತಿ ಸಡಿಲಿಸಲು ಉದ್ಯೋಗಾಕಾಂಕ್ಷಿಗಳ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 20:30 IST
Last Updated 7 ಫೆಬ್ರುವರಿ 2022, 20:30 IST
   

ಬೆಂಗಳೂರು: ‘ರಾಜ್ಯ ಸರ್ಕಾರವು 2022–23ನೇ ಸಾಲಿನಲ್ಲಿ ನಡೆಸಲಿರುವ ಎಲ್ಲ ನೇಮಕಾತಿಗಳಲ್ಲೂ ವಯೋಮಿತಿ ಸ‌ಡಿಲಗೊಳಿಸಬೇಕು’ ಎಂದು ಉದ್ಯೋಗಾಕಾಂಕ್ಷಿಗಳು ಒತ್ತಾಯಿಸಿದ್ದಾರೆ.

‘ಕೋವಿಡ್‌ನಿಂದಾಗಿ ಹಲವು ಇಲಾಖೆಗಳಲ್ಲಿ ಹೊಸ ನೇಮಕಾತಿ ನಡೆದಿಲ್ಲ. 2011ರ ಕೆಎಎಸ್‌ ಹಾಗೂ ಕೆ.ಇ.ಬಿ.ನೇಮಕಾತಿಗಳನ್ನು ರದ್ದು ಮಾಡಲಾಗಿದೆ. ಕೆಲವು ಖಾಸಗಿ ಕಂಪನಿಗಳು ಕೋವಿಡ್‌ ನೆಪ ಮುಂದಿಟ್ಟು ಹಲವರನ್ನು ಕೆಲಸದಿಂದ ವಜಾಗೊಳಿಸಿವೆ.

ಹೀಗಾಗಿ ನಿರುದ್ಯೋಗಿಗಳ ಸಂಖ್ಯೆ ಏರಿದೆ. ವಯೋಮಿತಿ ಸಡಿಲಗೊಳಿಸಿದರೆ ‘ಡಿ’ ಗ್ರೂಪ್‌ ಹುದ್ದೆಗಳಿಗಾದರೂ ಪರೀಕ್ಷೆ ಬರೆಯಬಹುದು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.