ADVERTISEMENT

ಗ್ರಾಮೀಣ ‘ಆಶಾ’ರನ್ನು ತಲುಪಿಲ್ಲ ₹ 3 ಸಾವಿರ

ಪ್ರತಿ ತಿಂಗಳು ₹ 4 ಸಾವಿರ ಪ್ರೋತ್ಸಾಹಧನವೂ ಖಾತರಿ ಇಲ್ಲ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 22:06 IST
Last Updated 30 ಜೂನ್ 2020, 22:06 IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಸಂಬಳ 12,000ಕ್ಕೆ ಹೆಚ್ಚಳ ಹಾಗೂ ಕೋವಿಡ್ -19 ಸಂದರ್ಭದಲ್ಲಿ ಅವಶ್ಯಕ ವಸ್ತುಗಳನ್ನು ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಮಲ್ಲೇಶ್ವರಂನಲ್ಲಿ ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಸಂಬಳ 12,000ಕ್ಕೆ ಹೆಚ್ಚಳ ಹಾಗೂ ಕೋವಿಡ್ -19 ಸಂದರ್ಭದಲ್ಲಿ ಅವಶ್ಯಕ ವಸ್ತುಗಳನ್ನು ನೀಡಬೇಕೆಂದು ಆಗ್ರಹಿಸಿ ಮಂಗಳವಾರ ಮಲ್ಲೇಶ್ವರಂನಲ್ಲಿ ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೊರೊನಾ ಸೇನಾನಿಗಳಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇನ್ನೂ ₹ 3 ಸಾವಿರ ಪ್ರೋತ್ಸಾಹಧನ ತಲುಪಿಯೇ ಇಲ್ಲ. ನಗರ ಪ್ರದೇಶಗಳು, ಜಿಲ್ಲಾ ಕೇಂದ್ರಗಳಲ್ಲಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಇಲಾಖೆಯಿಂದ ನೀಡಲಾಗುತ್ತಿರುವ ₹ 3 ಸಾವಿರ ಲಭಿಸಿದೆ. ಅವರಿಗೆ ಚೆಕ್‌ ಕೊಟ್ಟಿದ್ದಕ್ಕೆ ಪ್ರಚಾರವೂ ಸಿಕ್ಕಿದೆ. ಗ್ರಾಮೀಣ ಭಾಗ
ದಲ್ಲಿ ಕೊಟ್ಟರೆ ಪ್ರಚಾರ ಸಿಗುವುದಿಲ್ಲ ಎಂಬ ಕಾರಣದಿಂದ ಅದು ಗ್ರಾಮೀಣ ಭಾಗದತ್ತ ಬಂದಿಲ್ಲ ಎಂದು ಹಲವಾರು ಕಾರ್ಯಕರ್ತೆಯರು ಆರೋಪಿಸಿದರು.

‘ಆಶಾ ಕಾರ್ಯಕರ್ತೆಯರಿಗೆ ನಿಶ್ಚಿತವಾಗಿ ಕೈ ಸೇರುತ್ತಿರುವುದು ₹ 4 ಸಾವಿರ ಮಾತ್ರ. ಸರ್ಕಾರ ಈ ರೀತಿಯಲ್ಲಿ ನಡೆಸಿಕೊಂಡರೆ ಬಹಳ ಅಪಾಯ ಎದುರಾಗಬಹುದು’ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಹೇಳಿದರು.

‘ಈಗಾಗಲೇ 18,941 ಆಶಾ ಕಾರ್ಯಕರ್ತೆಯರಿಗೆ ₹ 5.94 ಕೋಟಿ ಗೌರವಧನ ನೀಡಲಾಗಿದೆ. ಯಾರಿಗೂ ಬಾಕಿ ಉಳಿಸಿಕೊಳ್ಳುವುದಿಲ್ಲ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಿಂಗಳಿಗೆ ₹12 ಸಾವಿರ ಗೌರವಧನಕ್ಕೆ ಆಗ್ರಹ
‘ತಿಂಗಳಿಗೆ ₹12 ಸಾವಿರ ಗೌರವಧನ ನೀಡಬೇಕು’ ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಹಯೋಗದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮಲ್ಲೇಶ್ವರದಲ್ಲಿರುವ ಎಐಟಿ ಯುಸಿ ಕಚೇರಿ ಎದುರು ಸೇರಿದ್ದ ಕಾರ್ಯಕರ್ತೆಯರು, ‘ಬೇಡಿಕೆ ಈಡೇರಿಕೆಗೆ ಸರ್ಕಾರ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಜುಲೈ 10ರಿಂದ ರಾಜ್ಯದಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ಆರಂಭಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಆಶಾ ಕಾರ್ಯರ್ತೆಯರು ಕೊರೊನಾ ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗೌರವ ಧನ ಹೆಚ್ಚಿಸುವ ಜೊತೆ ಯಲ್ಲೇ ಗುಣಮಟ್ಟದ ಮಾಸ್ಕ್, ಫೇಸ್ ಶಿಲ್ಡ್, ಸ್ಯಾನಿಟೈಸರ್, ಗ್ಲೌಸ್‌ಗಳನ್ನು’ ಎಂದೂ ಒತ್ತಾಯಿಸಿದರು.

ಮನವಿ ಸಲ್ಲಿಕೆ: ಎಐಯುಟಿಯುಸಿ ಬೆಂಗಳೂರು ಜಿಲ್ಲಾ ಘಟಕದ ಕಾರ್ಯ ದರ್ಶಿ ಜಿ.ಹನುಮೇಶ್ ನೇತೃತ್ವದ ನಿಯೋಗವು ಉಪಮುಖ್ಯಮಂತ್ರಿಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

*
ಆಶಾ ಕಾರ್ಯಕರ್ತೆಯರಿಗೆ ₹ 6.74 ಕೋಟಿ ಗೌರವಧನ ನೀಡಲು ಬಾಕಿ ಇದೆ, ಈ ತಿಂಗಳೊಳಗೆ ಸಂದಾಯ ಮಾಡಲಾಗುವುದು -ಎಸ್‌.ಟಿ.ಸೋಮಶೇಖರ್‌, ಸಹಕಾರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.