ADVERTISEMENT

ಪ್ರತಿ ಕೋಳಿಗೆ ₹5 ಪ್ರೋತ್ಸಾಹ ಧನ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 19:10 IST
Last Updated 7 ಫೆಬ್ರುವರಿ 2023, 19:10 IST
   

ಬೆಂಗಳೂರು: ‘ಕೋಳಿ ಸಾಕಾಣಿಕೆಯನ್ನು ಕೃಷಿ ಎಂದು ಪರಿಗಣಿಸಿ ಮುಂಬರುವ ಬಜೆಟ್‌ನಲ್ಲಿ ಕುಕ್ಕುಟ ಕ್ಷೇತ್ರದ ಅಭಿವೃದ್ಧಿಗೆ ಸಮಗ್ರ ಕಾನೂನನ್ನು ಘೋಷಣೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರ ರೈತರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.

‘ಪ್ರತಿ ಲೀಟರ್‌ ಹಾಲಿಗೆ ನೀಡುವ ₹ 5 ಪ್ರೋತ್ಸಾಹ ಧನವನ್ನು ಪ್ರತಿ ಮಾಂಸದ ಕೋಳಿಗೂ ನೀಡಬೇಕು. ಕೃಷಿ ಮತ್ತು ರೇಷ್ಮೆ ಬೆಳೆಗಾರರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೋಳಿ ಸಾಕಾಣಿಕೆದಾರ ರೈತರಿಗೂ ವಿಸ್ತರಿಸಬೇಕು. ಸರ್ಕಾರ ಕುಕ್ಕುಟ ಕ್ಷೇತ್ರವನ್ನು ಹೈನುಗಾರಿಕೆ ಕ್ಷೇತ್ರಕ್ಕಿಂತ ಬಲಿಷ್ಠವಾಗಿ ಅಭಿವೃದ್ಧಿ ಪಡಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಂಘದ ಗೌರವ ಅಧ್ಯಕ್ಷ ಜೆ.ಸಿ. ಬಯ್ಯಾರೆಡ್ಡಿ ಎಂದು ಮಂಗಳವಾರ ಸುದ್ದಿಗೋಷ್ಠಿ ಹೇಳಿದರು.

‘ರಾಜ್ಯದಲ್ಲಿ 10 ಸಾವಿರ ಕೋಳಿ ಸಾಕಾಣಿಕೆದಾರ ರೈತರು ವಿವಿಧ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡು ಮಾಂಸದ ಕೋಳಿಗಳನ್ನು (ಬ್ರಾಯಿಲರ್) ಸಾಕಾಣಿಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕುಕ್ಕುಟ ಕ್ಷೇತ್ರವೂ ವೇಗವಾಗಿ ಬೆಳೆಯುತ್ತಿದ್ದು, ಪ್ರತಿದಿನ ಸಾವಿರಾರು ಕೋಟಿ ರೂಪಾಯಿ ವಹಿವಾಟು ನಡೆಯುತ್ತಿದೆ. ಇದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಅವಕಾಶಗಳಿದ್ದರೂ ನಿರ್ಲಕ್ಷ್ಯ ವಹಿಸಿದೆ. ಇದರಿಂದ, ರೈತರಿಗೆ ಸಾಕಾಣಿಕೆ ದರ ನಿಗದಿ ಇತ್ಯಾದಿ ಸಮಸ್ಯೆಗಳಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.