ADVERTISEMENT

ಪ್ರಾದೇಶಿಕ ಭಾಷೆಗಳಲ್ಲಿ ಎನ್‌ಇಟಿ ಪರೀಕ್ಷೆಗೆ ಆಗ್ರಹ

ಕೇಂದ್ರ ಸಚಿವರಿಗೆ ಪತ್ರ ಬರೆದ ಟಿ.ಎಸ್. ನಾಗಾಭರಣ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 20:12 IST
Last Updated 29 ಸೆಪ್ಟೆಂಬರ್ 2020, 20:12 IST
ಟಿ.ಎಸ್.ನಾಗಾಭರಣ
ಟಿ.ಎಸ್.ನಾಗಾಭರಣ   

ಬೆಂಗಳೂರು: ‘ಎನ್.ಇ.ಟಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಇರುವುದರಿಂದ ದಕ್ಷಿಣ ಭಾರತದ ರಾಜ್ಯಗಳ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಸಮಸ್ಯೆಯಾಗುತ್ತಿದೆ. ಹಾಗಾಗಿ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಕ್ರಮಕೈಗೊಳ್ಳಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಸಂಬಂಧ ಅವರುಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ.ರಾಜ್ಯ ಸರ್ಕಾರಗಳು ಪದವಿ ಕಾಲೇಜುಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ನಡೆಸುತ್ತಿದೆ. ಈ ನೇಮಕಾತಿಗೆ ಅರ್ಹತೆ ಪಡೆಯಲು ಯುಜಿಸಿ ಸಂಸ್ಥೆಯು ನಡೆಸುವಎನ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಅವಶ್ಯಕ. ಆದರೆ, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಪ್ರಾದೇಶಿಕ ಭಾಷೆಯಲ್ಲಿ ಇರದ ಕಾರಣ ದಕ್ಷಿಣ ರಾಜ್ಯದ ವಿದ್ಯಾರ್ಥಿಗಳು ಉತ್ತೀರ್ಣರಾಗಲು ಸಾಧ್ಯವಾಗುತ್ತಿಲ್ಲ. ಇದು ಸಂವಿಧಾನದ 14 ಮತ್ತು 15ನೇ ವಿಧಿಯ ಸಂಪೂರ್ಣ ಉಲ್ಲಂಘನೆಯಾಗಿದೆ’ ಎಂದು ತಿಳಿಸಿದ್ದಾರೆ.

‘ಒಕ್ಕೂಟ ವ್ಯವಸ್ಥೆಯಲ್ಲಿ ಭಾರತ ಸರ್ಕಾರದ ಸಂವಿಧಾನದ 8ನೇ ಪರಿಚ್ಚೇದದ ಅನುಸಾರ ಕನ್ನಡ ಸೇರಿದಂತೆ 22 ಭಾಷೆಗಳಿಗೂ ಮಾನ್ಯತೆ ನೀಡಬೇಕು. ಆಯಾ ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಸರ್ಕಾರ ಪರೀಕ್ಷೆಗಳನ್ನು ನಡೆಸಲು ಮುಂದಾಗಬೇಕು’ ಎಂದು ಪ್ರತಿಪಾದಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.