ADVERTISEMENT

ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ‘ಶಿರಸಿ ಬಂದ್’

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 20:33 IST
Last Updated 24 ಫೆಬ್ರುವರಿ 2021, 20:33 IST
ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಗೆ ಒತ್ತಾಯಿಸಿ ಶಿರಸಿ ನಗರದಲ್ಲಿ ಬುಧವಾರ ಅಂಗಡಿಗಳನ್ನು ಮುಚ್ಚಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು
ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಗೆ ಒತ್ತಾಯಿಸಿ ಶಿರಸಿ ನಗರದಲ್ಲಿ ಬುಧವಾರ ಅಂಗಡಿಗಳನ್ನು ಮುಚ್ಚಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು   

ಶಿರಸಿ: ಉತ್ತರ ಕನ್ನಡದ ಘಟ್ಟದ ಮೇಲಿನ ಏಳು ತಾಲ್ಲೂಕುಗಳನ್ನು ಒಳಗೊಂಡು ಪ್ರತ್ಯೇಕ ಶಿರಸಿ ಜಿಲ್ಲೆ ರಚನೆಗೆ ಒತ್ತಾಯಿಸಿ ಮೊದಲ ಬಾರಿಗೆ ಬುಧವಾರ ‘ಶಿರಸಿ ಬಂದ್’ ನಡೆಯಿತು.

ಶಿರಸಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್‌ ಸಂಖ್ಯೆಯ ಜನರು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡರು. ನಗರದ ಅಂಗಡಿ–ಮುಂಗಟ್ಟುಗಳನ್ನು ಮಧ್ಯಾಹ್ನದವರೆಗೂ ಮುಚ್ಚಲಾಗಿತ್ತು. ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ ವಹಿವಾಟು ಸ್ತಬ್ಧಗೊಂಡಿತ್ತು. ನಗರ ವ್ಯಾಪ್ತಿಯ ಕೆಲ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ಮುಖ್ಯ ರಸ್ತೆಗಳಲ್ಲಿ ಪ್ರತಿಭಟನೆ ಜಾಥಾ ನಡೆಸಿ ಬಳಿಕ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.