ADVERTISEMENT

ರಾಜ್ಯದಲ್ಲಿ ಡೆಂಗಿ ಪ್ರಕರಣ ಏರಿಕೆ: 146 ಮಂದಿಗೆ ಜ್ವರ ದೃಢ

ಈ ತಿಂಗಳು 2,886 ಶಂಕಿತರಿಗೆ ಡೆಂಗಿ ಪರೀಕ್ಷೆ *146 ಮಂದಿಗೆ ಜ್ವರ ದೃಢ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 16:19 IST
Last Updated 14 ಜೂನ್ 2022, 16:19 IST
   

ಬೆಂಗಳೂರು: ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಜ್ವರಕ್ಕೆ ಒಳಪಡುವವರ ಸಂಖ್ಯೆ ಏರಿಕೆ ಕಂಡಿದ್ದು, ಈ ತಿಂಗಳು 2,886 ಡೆಂಗಿ ಶಂಕಿತರನ್ನು ಗುರುತಿಸಲಾಗಿದೆ. ಅವರಲ್ಲಿ 146 ಮಂದಿ ಡೆಂಗಿ ಪೀಡಿತರಾಗಿರುವುದು ದೃಢಪಟ್ಟಿದೆ.

ಈವರೆಗೆ ಡೆಂಗಿ ಜ್ವರಕ್ಕೆ ಒಳಗಾದವರ ಸಂಖ್ಯೆ 1,860ಕ್ಕೆ ತಲುಪಿದೆ. ಈ ವರ್ಷ ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.36 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 15,284 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 15,502 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದ್ದು, 388 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. 2021ರಲ್ಲಿ 7,189 ಮಂದಿಡೆಂಗಿಪೀಡಿತರಾಗಿದ್ದರು. ಅವರಲ್ಲಿ ಐವರುಮೃತಪಟ್ಟಿದ್ದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ಪತ್ತೆಯಾಗಿವೆ.ಪ್ರಕರಣಗಳ ಸಂಖ್ಯೆ ನಾಲ್ಕು ಜಿಲ್ಲೆಗಳಲ್ಲಿ ಮೂರಂಕಿ, 25 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ.ಉಡುಪಿಯಲ್ಲಿ 217, ಮೈಸೂರಿನಲ್ಲಿ 171,ಚಿತ್ರದುರ್ಗದಲ್ಲಿ 105,ಕೊಪ್ಪಳದಲ್ಲಿ 94, ಬಳ್ಳಾರಿಯಲ್ಲಿ 89, ವಿಜಯಪುರದಲ್ಲಿ 85,ದಕ್ಷಿಣ ಕನ್ನಡದಲ್ಲಿ 81, ಶಿವಮೊಗ್ಗದಲ್ಲಿ 76 ಹಾಗೂ ದಾವಣಗೆರೆಯಲ್ಲಿ 60 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 50ಕ್ಕಿಂತ ಕಡಿಮೆ ಇವೆ.

ADVERTISEMENT

27 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.10 ಸಾವಿರಕ್ಕೂ ಅಧಿಕ ಮಂದಿಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 6 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ447 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ವಿಜಯಪುರದಲ್ಲಿ 96, ಕೋಲಾರದಲ್ಲಿ 76,ಬೆಂಗಳೂರು ಗ್ರಾಮಾಂತರದಲ್ಲಿ 38,ತುಮಕೂರಿನಲ್ಲಿ 36, ಚಿತ್ರದುರ್ಗದಲ್ಲಿ 26, ದಾವಣಗೆರೆಯಲ್ಲಿ 19, ಹಾಸನದಲ್ಲಿ 15, ರಾಮನಗರದಲ್ಲಿ 14, ಬಾಗಲಕೋಟೆಯಲ್ಲಿ 11 ಹಾಗೂ ಶಿವಮೊಗ್ಗದಲ್ಲಿ 10 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆ ಇವೆ.

‘ಹವಾಮಾನ ಬದಲಾವಣೆ ಹಾಗೂ ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಸೊಳ್ಳೆಗಳ ಕಡಿತದಿಂದ ಉಂಟಾಗುವಡೆಂಗಿ, ಚಿಕೂನ್‌ಗುನ್ಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.ಸ್ವಚ್ಛತೆ ಸೇರಿದಂತೆ ವಿವಿಧ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು’ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.