ADVERTISEMENT

ರಾಜ್ಯದಲ್ಲಿ ಡೆಂಗಿ ಉಲ್ಬಣ: 20 ದಿನಗಳಲ್ಲಿ 1,172 ಮಂದಿಗೆ ದೃಢ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 16:06 IST
Last Updated 23 ಜುಲೈ 2022, 16:06 IST
   

ಬೆಂಗಳೂರು: ಹವಾಮಾನದಲ್ಲಿ ವೈಪರೀತ್ಯ ಹಾಗೂ ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಕಳೆದ 20 ದಿನಗಳಲ್ಲಿ 1,172 ಪ್ರಕರಣಗಳು ದೃಢಪಟ್ಟಿವೆ.

ಕಳೆದೊಂದು ತಿಂಗಳಿನಿಂದ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದಿದೆ. ಈವರೆಗೆ ಡೆಂಗಿ ಪೀಡಿತರಾದವರ ಒಟ್ಟು ಸಂಖ್ಯೆ 3,714ಕ್ಕೆ ಏರಿಕೆಯಾಗಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಕಳೆದ ವರ್ಷ ಈ ವೇಳೆ1,502 ಡೆಂಗಿ ಪ್ರಕರಣಗಳು ದೃಢಪಟ್ಟಿದ್ದವು.

ಈ ವರ್ಷ 69 ಸಾವಿರಕ್ಕೂ ಅಧಿಕ ಡೆಂಗಿಶಂಕಿತರನ್ನು ಗುರುತಿಸಿ,ತಪಾಸಣೆಗೆ ಒಳಪಡಿಸಲಾಗಿದೆ. 29 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 26,827 ಮಂದಿಯಲ್ಲಿಡೆಂಗಿಶಂಕೆ ವ್ಯಕ್ತವಾಗಿದ್ದು, 723 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. 388 ಪ್ರಕರಣಗಳು 7 ತಿಂಗಳಲ್ಲಿ ವರದಿಯಾದರೇ, ನಂತರದ 20 ದಿನಗಳಲ್ಲಿ 335 ಮಂದಿ ಡೆಂಗಿ ಪೀಡಿತರಾಗಿದ್ದಾರೆ.

ADVERTISEMENT

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ಪತ್ತೆಯಾಗಿವೆ.ಪ್ರಕರಣಗಳ ಸಂಖ್ಯೆ 10 ಜಿಲ್ಲೆಗಳಲ್ಲಿ ಮೂರಂಕಿ, 18 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ.ಉಡುಪಿಯಲ್ಲಿ 369, ಮೈಸೂರಿನಲ್ಲಿ 349,ದಕ್ಷಿಣ ಕನ್ನಡದಲ್ಲಿ 189,ಶಿವಮೊಗ್ಗದಲ್ಲಿ 172, ಚಿತ್ರದುರ್ಗದಲ್ಲಿ 168, ಹಾಸನದಲ್ಲಿ 132, ವಿಜಯಪುರದಲ್ಲಿ 125, ದಾವಣಗೆರೆಯಲ್ಲಿ 119, ಕಲಬುರ್ಗಿಯಲ್ಲಿ 105, ಬೆಳಗಾವಿಯಲ್ಲಿ 103 ಹಾಗೂ ಕೊಪ್ಪಳದಲ್ಲಿ 101ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ಕ್ಕಿಂತ ಕಡಿಮೆ ಇವೆ.2021ರಲ್ಲಿ 7,189 ಮಂದಿಡೆಂಗಿಪೀಡಿತರಾಗಿದ್ದರು. ಅವರಲ್ಲಿ ಐವರುಮೃತಪಟ್ಟಿದ್ದರು.

857 ಮಂದಿಗೆ ಚಿಕೂನ್‌ಗುನ್ಯಾ:28 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ.23 ಸಾವಿರಕ್ಕೂ ಅಧಿಕ ಮಂದಿಚಿಕೂನ್‌ಗುನ್ಯಾ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 13 ಸಾವಿರಕ್ಕೂ ಅಧಿಕ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ857 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ.

ವಿಜಯಪುರದಲ್ಲಿ 147, ಕೋಲಾರದಲ್ಲಿ 112, ಹಾಸನದಲ್ಲಿ 71, ಬೆಂಗಳೂರು ಗ್ರಾಮಾಂತರದಲ್ಲಿ 56, ಚಿತ್ರದುರ್ಗದಲ್ಲಿ 51 ಹಾಗೂತುಮಕೂರಿನಲ್ಲಿ 49 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 40ಕ್ಕಿಂತ ಕಡಿಮೆಯಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.