ADVERTISEMENT

ಡೆಂಗಿ ಜ್ವರ: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಳ- 15 ದಿನಗಳಲ್ಲಿ 776 ಪ್ರಕರಣಗಳು ದೃಢ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 16:29 IST
Last Updated 15 ಅಕ್ಟೋಬರ್ 2021, 16:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಜ್ವರಕ್ಕೆ ಒಳಪಡುವವರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 15 ದಿನಗಳಲ್ಲಿ 776 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ವರದಿಯಾಗಿವೆ. 16 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿಯಲ್ಲಿದೆ.ಈ ವರ್ಷ ಮೊದಲ ಆರು ತಿಂಗಳ ಅವಧಿಯಲ್ಲಿಡೆಂಗಿನಿಯಂತ್ರಣದಲ್ಲಿತ್ತು. ಮಳೆ ಹೆಚ್ಚಳವಾದ ಬಳಿಕ ಈ ಜ್ವರಕ್ಕೆ ಒಳಪಡುವವರ ಸಂಖ್ಯೆ ಏರುಗತಿ ಪಡೆದುಕೊಂಡಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷ ರಾಜ್ಯದಲ್ಲಿ ಯಾವುದೇಡೆಂಗಿಮರಣ ಪ್ರಕರಣ ವರದಿಯಾಗಿಲ್ಲ. ಆದರೆ, ಈ ಜ್ವರ ಎದುರಿಸಿದವರ ಸಂಖ್ಯೆ 4,287ಕ್ಕೆ ಏರಿಕೆಯಾಗಿದೆ.ಕಳೆದ ವರ್ಷ 3,823 ಮಂದಿಯಲ್ಲಿಡೆಂಗಿಜ್ವರ ಕಾಣಿಸಿಕೊಂಡಿತ್ತು. ಅವರಲ್ಲಿ 5 ಮಂದಿ ಮೃತಪಟ್ಟಿದ್ದರು.

ADVERTISEMENT

ಈ ವರ್ಷ ಬೆಂಗಳೂರಿನಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿದ್ದು, 756 ಮಂದಿಡೆಂಗಿಜ್ವರ ಎದುರಿಸಿದ್ದಾರೆ. ಕಲಬುರಗಿಯಲ್ಲಿ 338, ಉಡುಪಿಯಲ್ಲಿ 312, ಶಿವಮೊಗ್ಗದಲ್ಲಿ 305,ಕೊಪ್ಪಳದಲ್ಲಿ 220, ದಕ್ಷಿಣ ಕನ್ನಡದಲ್ಲಿ 206, ದಾವಣಗೆರೆಯಲ್ಲಿ 209,ಬಳ್ಳಾರಿಯಲ್ಲಿ 200, ವಿಜಯಪುರದಲ್ಲಿ 190,ಹಾವೇರಿಯಲ್ಲಿ 169,ಮಂಡ್ಯದಲ್ಲಿ 161,ಗದಗದಲ್ಲಿ 127, ಯಾದಗಿರಿಯಲ್ಲಿ 122, ಬೀದರ್‌ನಲ್ಲಿ 120, ತುಮಕೂರಿನಲ್ಲಿ 117 ಹಾಗೂ ಚಿತ್ರದುರ್ಗದಲ್ಲಿ 113 ಮಂದಿಡೆಂಗಿಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗೆ ಇವೆ.

ರಾಜ್ಯದ 27 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ.ಈವರೆಗೆ ಈ ಮಾದರಿಯ ಜ್ವರಕ್ಕೆ ಒಳಗಾದವರ ಸಂಖ್ಯೆ1,415ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ, ರಾಯಚೂರು ಹಾಗೂ ದಕ್ಷಿಣ ಕನ್ನಡ ಬಿಟ್ಟು ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ಪ್ರಕರಣಗಳು ಖಚಿತಪಟ್ಟಿವೆ.

ಕಲಬುರಗಿ (185), ಶಿವಮೊಗ್ಗ (169), ಕೋಲಾರ (108), ತುಮಕೂರು (104) ಹಾಗೂ ಯಾದಗಿರಿ (103), ಬೆಂಗಳೂರು ನಗರ (100) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 100ರ ಗಡಿಯೊಳಗಡೆ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.