ADVERTISEMENT

ಹೆಬ್ಬಾಳಕರ ವಿರುದ್ಧ ಮಾನಹಾನಿ ಹೇಳಿಕೆ: ವಿಧಾನಸಭೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಗೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2024, 16:02 IST
Last Updated 19 ಡಿಸೆಂಬರ್ 2024, 16:02 IST
<div class="paragraphs"><p>ಸುವರ್ಣ ಸೌಧ</p></div>

ಸುವರ್ಣ ಸೌಧ

   

ಬೆಳಗಾವಿ (ಸುವರ್ಣ ಸೌಧ): ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಸಿ.ಟಿ.ರವಿ ಅವರು ಮಾನಹಾನಿ ಹೇಳಿಕೆಗಳಿಂದ ನಿಂದಿಸಿದ ಪ್ರಕರಣವನ್ನು ವಿಧಾನಸಭೆಯಲ್ಲಿ ಕಾಂಗ್ರೆಸ್‌ ಶರತ್ ಬಚ್ಚೇಗೌಡ ಪ್ರಸ್ತಾಪಿಸಿದರು. ಇದು ಬಿಜೆಪಿ–ಕಾಂಗ್ರೆಸ್ ಮಧ್ಯೆ ವಾಕ್ಸಮರಕ್ಕೆ ಕಾರಣವಾಯಿತು.

ಆಗ ಮಧ್ಯ ಪ್ರವೇಶಿಸಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, ‘ಲಕ್ಷ್ಮೀ ಹೆಬ್ಬಾಳಕರ ಅವರು ಈ ಮನೆಯ ಸದಸ್ಯರಾಗಿದ್ದು, ಅವರಿಗೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯ. ಆದ್ದರಿಂದ ಈ ವಿಷಯವನ್ನು ಹಕ್ಕುಬಾಧ್ಯತಾ ಸಮಿತಿಗೆ ಒಪ್ಪಿಸಬೇಕು’ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ವಿಷಯವನ್ನು ಹಕ್ಕು ಬಾಧ್ಯತಾ ಸಮಿತಿಗೆ ಒಪ್ಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.