ತುಮಕೂರು: ರೆಸಾರ್ಟ್ ರಾಜಕೀಯ ಆರಂಭಿಸಿದ್ದೇ ಬಿಜೆಪಿ. ಆರಂಭವೂ ಅವರದೇ ಅಂತ್ಯಾನೂ ಅವರದ್ದೇ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ದೇವಸ್ಥಾನಕ್ಕೆ ಕಳಸ ಪ್ರತಿಷ್ಠಾಪನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
2008ರಲ್ಲಿ 113 ಶಾಸಕ ಸ್ಥಾನ ಗಳಿಸಿಕೊಳ್ಳಲು ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ಗೆ ಕರೆದುಕೊಂಡು ಹೋದವರೆ ಬಿಜೆಪಿಯವರು ಎಂದರು.
ನಾವು ರೆಸಾರ್ಟ್ರಾಜಕಾರಣ ಮಾಡಲ್ಲ. ಕಾಂಗ್ರೆಸ್ನವರು ರೆಸಾರ್ಟ್ಗೆ ಹೋಗಿದ್ದು ಲೋಕಸಭೆ ಚುನಾವಣೆ ಕುರಿತು ಚರ್ಚಿಸುವುದಕ್ಕೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.