ADVERTISEMENT

ಹಿಂದೆ ದಂಗೆಯ ಮಾತಾಡಿದ್ದರು, ಈಗ ದೇವೇಗೌಡರ ಕುಟುಂಬ ದೌರ್ಜನ್ಯ ಎಸಗಿದೆ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 11:22 IST
Last Updated 13 ಫೆಬ್ರುವರಿ 2019, 11:22 IST
ಕಲ್ಲಿನ ಏಟು ಬಿದ್ದು ಬಿಜೆಪಿಯ ರಾಹುಲ್ ಕಿಣಿ ಗಾಯಗೊಂಡಿರುವುದು.
ಕಲ್ಲಿನ ಏಟು ಬಿದ್ದು ಬಿಜೆಪಿಯ ರಾಹುಲ್ ಕಿಣಿ ಗಾಯಗೊಂಡಿರುವುದು.   

ಬೆಂಗಳೂರು:ಈ ಹಿಂದೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ ದಂಗೆ ಏಳಿಸುವ ಮಾತಾಡಿದ್ದರು. ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು ಅದರಿಂದ ಪ್ರಚೋದನೆಗೊಂಡು ಜನಪ್ರತಿನಿಧಿ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೇವೇಗೌಡರ ಕುಟುಂಬದ ದೌರ್ಜನ್ಯಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಅಗತ್ಯವಿಲ್ಲ ಎಂದು ಆಪಾದಿಸಿ ರಾಜ್ಯ ಬಿಜೆಪಿ ಟ್ವಿಟ್‌ ಮಾಡಿದೆ.

‘ದೇವೇಗೌಡರಿಗೆ ವಯಸ್ಸಾಯಿತು, ಕುಮಾರಸ್ವಾಮಿಗೆ ಆರೋಗ್ಯ ಸರಿ ಇಲ್ಲ. ಇಬ್ಬರೂ ಹೋದರೆ ಪಕ್ಷಕ್ಕೆ ಉಳಿಗಾಲ ಇಲ್ಲ’ ಎಂದು ಪ್ರೀತಂ ಗೌಡ ಮಾತನಾಡಿರುವುದು ಆಡಿಯೊದಲ್ಲಿದೆ. ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿವೆ. ಜತೆಗೆ ಇದೇ ವಿಷಯನ್ನು ಮುಂದಿಟ್ಟುಕೊಂಡು ಜೆಡಿಎಸ್‌ ಕಾರ್ಯಕರ್ತರು ಪ್ರೀತಂ ಗೌಡ ನಿವಾಸದ ಎದುರು ಇಂದು ಪ್ರತಿಭಟನೆಯನ್ನೂ ಮಾಡಿದ್ದಾರೆ. ಈ ವೇಳೆ ಬಿಜೆಪಿಯ ಕಾರ್ಯಕರ್ತನಿಗೆ ಕಲ್ಲೇಟು ಬಿದ್ದು, ಗಾಯಗೊಂಡಿದ್ದಾರೆ.

* ಇವನ್ನೂ ಓದಿ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.