ADVERTISEMENT

ಧರ್ಮೇಗೌಡ ಸಾವಿಗೆ ಆಘಾತ ವ್ಯಕ್ತಪಡಿಸಿದ ದೇವೇಗೌಡ, ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 2:07 IST
Last Updated 29 ಡಿಸೆಂಬರ್ 2020, 2:07 IST
   


ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಸಾವಿನ ಕುರಿತಂತೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್ ಉಪಸಭಾಪತಿ ಹಾಗೂ ಮುಖಂಡರಾದ ಎಸ್.ಎಲ್. ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯದ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ವಿಧಾನಪರಿಷತ್ ಉಪಸಭಾಪತಿ, ಪಕ್ಷದ ಹಿರಿಯ ಮುಖಂಡರು ಹಾಗೂ ನನ್ನ ಸಹೋದರರಂತಿದ್ದ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತವನ್ನುಂಟುಮಾಡಿದೆ. ನಿಷ್ಕಲ್ಮಶ ವ್ಯಕ್ತಿತ್ವದ ಸಜ್ಜನ ರಾಜಕಾರಣಿಯೊಬ್ಬರನ್ನು ನಾವು ಕಳೆದುಕೊಂಡಿದ್ದೇವೆ. ಧರ್ಮೇಗೌಡರ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.