ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ 2020ನೇ ಸಾಲಿನ ಫಲಿತಾಂಶ ಇತ್ತೀಚೆಗೆ ಪ್ರಕಟಗೊಂಡಿದ್ದು, ಆರ್.ಎನ್. ಬಿಂದು ಮಣಿ ಅವರು 468 ನೇ ರ್ಯಾಂಕ್ ಪಡೆದಿದ್ದಾರೆ.
ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಮಗಳ ಈ ಸಾಧನೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೆಎಸ್ಆರ್ಪಿ ಹೆಡ್ ಕಾನ್ಸ್ಟೇಬಲ್ ಅವರ ಮಗಳು ಬಿಂದು ಮಣಿ ಅವರನ್ನು ಸ್ವಾಗತಿಸಲು ನನಗೆ ಹೆಮ್ಮೆಯಾಗುತ್ತಿದೆ. ತನ್ನ ಮೊದಲ ಪ್ರಯತ್ನದಲ್ಲೇ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ 468 ನೇ ರ್ಯಾಂಕ್ ಪಡೆದಿದ್ದಾರೆ. ಆಕೆಗೆ ಶುಭಾಶಯಗಳು ಮತ್ತು ಹೆಮ್ಮೆಯ ಪೋಷಕರಿಗೆ ಅಭಿನಂದನೆಗಳು’ ಎಂದು ಶುಭ ಹಾರೈಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.