ADVERTISEMENT

ಹತ್ಯೆ ಹಿಂದೆ ಯಾವುದೇ ಸಂಘಟನೆಗಳಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ: ಡಿಜಿಪಿ ಸೂದ್

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 7:36 IST
Last Updated 1 ಆಗಸ್ಟ್ 2022, 7:36 IST
ಡಿಜಿಪಿ ಪ್ರವೀಣ್ ಸೂದ್
ಡಿಜಿಪಿ ಪ್ರವೀಣ್ ಸೂದ್    

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರುಹತ್ಯೆಗಳಲ್ಲಿ ಭಾಗಿಯಾದ ಆರೋಪಿಗಳು ಯಾವುದೇ ಸಂಘಟನೆಯವರಾಗಿರಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವ್ಯಕ್ತಿ, ಸಂಘಟನೆ, ಸಿದ್ದಾಂತದವರು ಈ ಕೃತ್ಯಗಳ ಹಿಂದಿದ್ದರೂ ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅವರು
ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಯಾವುದೇ ಕೊಲೆ ನಡೆದರೂ ಸತ್ತವರು ಹಿಂದೂಗಳೊ, ಮುಸ್ಲಿಮರೋ ಅಥವಾ ಕ್ರೈಸ್ತರೊ ಎಂದು ನೋಡುವುದಿಲ್ಲ. ಅದನ್ನು ನಡೆಸಿದವರ ಧರ್ಮವನ್ನೂ ನೋಡುವುದಿಲ್ಲ ಎಂದರು.

ADVERTISEMENT

'ಮೂರು ಪ್ರಕರಣಗಳ ಆರೋಪಿಗಳನ್ನು ಬಂಧಿಸಿ ಮಾಡುತ್ತೇವೆಅದರಲ್ಲಿ ಯಾರು ಭಾಗಿಯಾದರೂ ಅವರನ್ನು ಬಂಧಿಸಿ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಪಿಗಳ ಶೀಘ್ರ ಬಂಧನವಾಗುವ ನಿರೀಕ್ಷೆ ಇದೆ.' ಎಂದರು.

'ಅಪರಾಧದ ಕುರಿತು ಮಾಹಿತಿ ಇದ್ದವರು ಪೊಲೀಸರ ಜೊತೆ ಹಂಚಿಕೊಳ್ಳಬಹುದು. ಮಾಹಿತಿ ಗೊತ್ತಿದ್ದೂ ಪೊಲೀಸರ ಜೊತೆ ಹಂಚಿಕೊಳ್ಳದಿದ್ದರೇ ಅವರ ಕೈವಾಡವೂ ಇದೆ ಎಂದು ಭಾವಿಸಬೇಕಾಗುತ್ತದೆ' ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಕೊಲೆ ಪ್ರಕರಣ ಆಗಿದೆ. ಮಸೂದ್ ಕೊಲೆ ಪ್ರಕರಣದಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ.. ಪ್ರವೀಣ್ ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನವಾಗಿದೆ. ಫಾಝಿಲ್ ಪ್ರಕರಣದಲ್ಲಿ ಒಬ್ಬರನ್ನು ಬಂಧಿಸಲಾಗಿದ್ದು,ಅವರು ನೀಡಿದ ಸುಳಿವು ಇತರ ಅಪರಾಧಿಗಳ ಪತ್ತೆಗೆ ನೆರವಾಗಲಿದೆ' ಎಂದರು.

'ನಗರ ಪೊಲೀಸ್ ಕಮೀಷನರ್ ಐಜಿಪಿ , ಎಸ್‌ಪಿ ಅವರ ಜೊತೆಗೆ ಚರ್ಚಿಸಿ ಮುಂದೆ ಇಂತಹ ಘಟನೆ ಆಗದಂತೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ. ಜಿಲ್ಲಾಧಿಕಾರಿ ಅವರ ಜೊತೆಗೆ ಚರ್ಚಿಸುತ್ತೇವೆ. ಮುಖ್ಯಮಂತ್ರಿ ಗಳು ಈ ಬಗ್ಗೆ ನಿರ್ದೇಶನ ನೀಡಿದ್ದಾರೆ. ಗಡಿ ಪ್ರದೇಶದಲ್ಲಿ ತಪಾಸಣೆ ಹೆಚ್ಚಿಲಾಗಿದೆ. ದ.ಕ ಜಿಲ್ಲೆಯಲ್ಲಿ ಪೊಲೀಸರ ಬಲ ಹೆಚ್ಚಿಸಲು ಕೋರಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.