ಮಂಗಳೂರು/ ಕುಂದಾಪುರ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕುಂದಾಪುರದ ಕೊಲ್ಲೂರಿನಲ್ಲಿ ಸೋಮವಾರ ಭಕ್ತರು ದೇವರ ದರ್ಶನ ಪಡೆದರು.
ಧರ್ಮಸ್ಥಳಕ್ಕೆ ನಾಡಿನ ವಿವಿಧೆಡೆಯಿಂದ ಬಂದ ಭಕ್ತರ ಪೈಕಿ ಬಹುತೇಕರು ಸಂಪ್ರದಾಯದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ಪುಣ್ಯ ಸ್ನಾನ ಮಾಡಿ, ದೇವಸ್ಥಾನಕ್ಕೆ ಭೇಟಿ ನೀಡಿದರು.
ಬಹುತೇಕರು ಬೀಡಿಗೆ (ಹೆಗ್ಗಡೆ ನಿವಾಸ) ಹೋಗಿ, ಅನಂತರ ಭೋಜನಾಲಯಕ್ಕೆ ತೆರಳಿದರು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯದಲ್ಲೂ ಭಕ್ತರು ದರ್ಶನ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.