ADVERTISEMENT

ಧರ್ಮಸ್ಥಳ: ತ್ಯಾಗಮೂರ್ತಿಗೆ ಭಕ್ತಿಪೂರ್ವಕ ಪಾದಾಭಿಷೇಕ

ಧರ್ಮಸ್ಥಳದಲ್ಲಿ ಬಾಹುಬಲಿಯ ಮಹಾಮಸ್ತಕಾಭಿಷೇಕ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 20:15 IST
Last Updated 13 ಫೆಬ್ರುವರಿ 2019, 20:15 IST
ಧರ್ಮಸ್ಥಳದಲ್ಲಿ ಬುಧವಾರ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಡೆಯಿತು
ಧರ್ಮಸ್ಥಳದಲ್ಲಿ ಬುಧವಾರ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಡೆಯಿತು   

ಉಜಿರೆ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಬುಧವಾರ ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ರತ್ನಗಿರಿಯಲ್ಲಿ 216 ಕಲಶಗಳಿಂದ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ ನಡೆಯಿತು. ಯಜ್ಞ ಶಾಲೆಯಲ್ಲಿ ಜಿನ ಸಹಸ್ರ ನಾಮ ವಿಧಾನ, ಧ್ವಜ ಪೂಜೆ, ಶ್ರೀಬಲಿ ವಿಧಾನ ಮತ್ತು ಮಹಾ ಮಂಗಳಾರತಿ ನಡೆದವು. ನಾನಾ ಭಾಗಗಳಿಂದ ಬಂದಿರುವ ಸಹಸ್ರಾರು ಭಕ್ತರು ಪಾದಾಭಿಷೇಕವನ್ನು ಕಣ್ತುಂಬಿಕೊಂಡರು.

ಮಹಾ ಮಸ್ತಕಾಭಿಷೇಕಕ್ಕೆ ಶೃಂಗಾರಗೊಂಡಿರುವ ಧರ್ಮಸ್ಥಳದ ಪಂಚ ಮಹಾವೈಭವ ವೇದಿಕೆಯಲ್ಲಿ ಭರತನ ಆಸ್ಥಾನ ವೈಭವ, ಆಯುಧಾಗಾರದಲ್ಲಿ ಚಕ್ರರತ್ನ ಉದಯ ಹಾಗೂ ಧರ್ಮಸ್ಥಳದಿಂದ ಶಾಂತಿವನದವರೆಗೆ ದಿಗ್ವಿಜಯ ಮೆರವಣಿಗೆಯ ರೂಪಕ ಪ್ರದರ್ಶನ ಜನರನ್ನು ಮಂತ್ರ ಮುಗ್ಧಗೊಳಿಸಿದವು.

ADVERTISEMENT

ವೇಷ ಭೂಷಣಗಳು, ಕಲಾಮೇಳಗಳು, ಜಾನಪದ ಶೈಲಿಯ ವಾಲಗ, ಕೊಂಬು, ಕಹಳೆ, ನಗಾರಿ, ಡೊಳ್ಳುಕುಣಿತ, ಕೇರಳದ ಚೆಂಡೆವಾದನ, ಸೈನಿಕರು, ನಾಸಿಕ್ ಬ್ಯಾಂಡ್, ಸೈನಿಕರು ದಿಗ್ವಿಜಯ ಮೊರವಣಿಗೆಗೆ ವಿಶೇಷ ಮೆರುಗನ್ನು ನೀಡಿದವು. 30ಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.