ADVERTISEMENT

Video | ಧರ್ಮಸ್ಥಳ ಪ್ರಕರಣ: ಭದ್ರತೆ ನಡುವೆ ಅಗೆಯುವ ಕಾರ್ಯ ಶುರು

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 9:21 IST
Last Updated 29 ಜುಲೈ 2025, 9:21 IST

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳನ್ನು ಹೊರ ತೆಗೆಯವ ಕಾರ್ಯ ಮಂಗಳವಾರ ಬಿಗಿ ಪೊಲೀಸ್ ಭದ್ರತೆಯೊಂದಿಗೆ ಆರಂಭವಾಯಿತು. ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಏಳೆಂಟು ಕಾರ್ಮಿಕರು ಜೋರು ಮಳೆಯ ನಡುವೆಯೇ ನೆಲವನ್ನು ಅಗೆದರು. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.