ADVERTISEMENT

ಡಯಾಲಿಸಿಸ್: ಅ.20 ರಿಂದ ಸೇವೆ ವ್ಯತ್ಯಯ ಸಾಧ್ಯತೆ

ಇಎಸ್‌ಐ, ಪಿಎಫ್ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 16:09 IST
Last Updated 14 ಅಕ್ಟೋಬರ್ 2022, 16:09 IST

ಬೆಂಗಳೂರು: ವೇತನ ಪಾವತಿ ವಿಳಂಬ ಹಾಗೂ ಕಾರ್ಮಿಕರ ಆರೋಗ್ಯ ವಿಮೆ (ಇಎಸ್‌ಐ) ಮತ್ತು ಭವಿಷ್ಯ ನಿಧಿಗೆ (ಪಿಎಫ್) ಹಣ ಪಾವತಿಸದಿರುವುದನ್ನು ವಿರೋಧಿಸಿ ರಾಜ್ಯದಾದ್ಯಂತಡಯಾಲಿಸಿಸ್ಘಟಕಗಳ ಸಿಬ್ಬಂದಿ ಇದೇ 20 ರಿಂದಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಿಂದಾಗಿಡಯಾಲಿಸಿಸ್ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿನ ಡಯಾಲಿಸಿಸ್ ಘಟಕಗಳನ್ನು ಬಿಆರ್‌ಎಸ್ ಏಜೆನ್ಸಿ ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಸಂಸ್ಥೆ ಜತೆಗಿನ ಒಪ್ಪಂದವನ್ನು ಆರೋಗ್ಯ ಇಲಾಖೆ ಕಳೆದ ವರ್ಷ ರದ್ದು ಮಾಡಿತ್ತು. ರಾಜ್ಯದ ಎಲ್ಲ ಡಯಾಲಿಸಿಸ್ ಘಟಕಗಳ ನಿರ್ವಹಣೆಯನ್ನು ಈಗ ಸಂಜೀವಿನಿ ಸಂಸ್ಥೆಗೆ ಹೊರಗುತ್ತಿಗೆ ನೀಡಲಾಗಿದೆ. ರಾಜ್ಯದ ಸರ್ಕಾರಿ ಆಸ್ಪ‍ತ್ರೆಗಳಲ್ಲಿ 120 ಡಯಾಲಿಸಿಸ್ ಘಟಕಗಳಿದ್ದು, 650 ಕ್ಕೂ ಅಧಿಕ ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಎಸ್‌ಐ, ಪಿಎಫ್‌ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಡಯಾಲಿಸಿಸ್ ಘಟಕದ ಸಿಬ್ಬಂದಿ ಕಳೆದ ಜೂನ್ ತಿಂಗಳಲ್ಲಿ ಸೇವೆ ಬಹಿಷ್ಕರಿಸಿ, ಬೆಂಗಳೂರಿನಲ್ಲಿ ಮುಷ್ಕರ ನಡೆಸಿದ್ದರು. ಆ ವೇಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸಿಬ್ಬಂದಿ ಜತೆಗೆ ಸಭೆ ನಡೆಸಿ, ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈವರೆಗೂ ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರಿಂದ ಮತ್ತೆ ಮುಷ್ಕರ ಕೈಗೊಳ್ಳಲು ನಿಬ್ಬಂದಿ ನಿರ್ಧರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.