ADVERTISEMENT

ವಿಪಕ್ಷ ನಾಯಕರಾಗಿ ಛಲವಾದಿ: ಅಧಿಕೃತ ಘೋಷಣೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 17:32 IST
Last Updated 24 ಜುಲೈ 2024, 17:32 IST
ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ   

ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಸ್ವಾಮಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ.

ಸಭಾಪತಿ ಬಸವರಾಜ ಹೊರಟ್ಟಿ ಅವರು, ಪರಿಷತ್ತಿನಲ್ಲಿ ಬುಧವಾರ ಈ ಪ್ರಕಟಣೆ ಮಾಡಿದರು. 

‘ಹೋರಾಟದ ಹಾದಿಯಿಂದ ಜವಾಬ್ದಾರಿಯುತ ಸ್ಥಾನಕ್ಕೆ ಬಂದಿದ್ದೀರಿ. ಈ ಸ್ಥಾನಕ್ಕೆ ಬಂದ ಮೇಲೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅಲ್ಲಿ ಕುಳಿತಂತೆ ಮಾತನಾಡಲು ಸಾಧ್ಯವಿಲ್ಲ. ಇದನ್ನೆಲ್ಲ ಅರಿತುಕೊಂಡು ಕಾರ್ಯನಿರ್ವಹಿಸಿ’ ಎಂದು ಹೊರಟ್ಟಿ ಸಲಹೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.