ADVERTISEMENT

ಕಾವ್ಯ ಕಡಮೆಗೆ ‘ದಿನಕರ ದೇಸಾಯಿ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 19:02 IST
Last Updated 16 ಅಕ್ಟೋಬರ್ 2018, 19:02 IST
.
.   

ಬೆಂಗಳೂರು: ಅಂಕೋಲಾದ ದಿನಕರ ದೇಸಾಯಿ ಪ್ರತಿಷ್ಠಾನ ನೀಡುವ ಪ್ರಸಕ್ತ ಸಾಲಿನ ‘ದಿನಕರ ದೇಸಾಯಿ ಕಾವ್ಯ ಪ್ರಶಸ್ತಿ’ಗೆ ಕಾವ್ಯ ಕಡಮೆ ನಾಗರಕಟ್ಟೆ ಅವರ ‘ಜೀನ್ಸ್‌ ತೊಟ್ಟ ದೇವರು’ ಕವನ ಸಂಕಲನ ಆಯ್ಕೆಯಾಗಿದೆ.

ಪ್ರಶಸ್ತಿಯು ₹10,000 ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್‌ 11 ರಂದು ಅಂಕೋಲಾದ ಗಂಗಾದೇವಿ ತೊರ್ಕೆ ಸಭಾ ಭವನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT