ಬೆಂಗಳೂರು:ವಿಶ್ವಾಸಮತ ಗೊತ್ತುವಳಿಯನ್ನು ಸೋಮವಾರ ನಡೆಸುವುದಾಗಿಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.
ಸೋಮವಾರವೇ ವಿಶ್ವಾಸಮತ ಗೊತ್ತುವಳಿ ಮೇಲೆ ಮತದಾನ ನಡೆಯಲಿದೆ. ಮತ್ತೆ ಮುಂದೂಡುವ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು ಜೆಡಿಎಸ್ ವಿಶ್ವಾಸಮತ ಯಾಚನೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ಮೋರೆ ಹೋಗಿದೆ. ಒಂದು ವೇಳೆ ಅದರ ವಿಚಾರಣೆ ಮುಂದಕ್ಕೆ ಹೋದರೂ ನಾವು ಸೋಮವಾರವೇ ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕಲಿದ್ದೇವೆ ಎಂದು ಗುಂಡೂರಾವ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.