ADVERTISEMENT

ಗೊತ್ತುವಳಿ ಮೇಲಿನ ಮತದಾನ ಮುಂದೂಡುವುದಿಲ್ಲ: ದಿನೇಶ್ ಗುಂಡೂರಾವ್ 

​ಪ್ರಜಾವಾಣಿ ವಾರ್ತೆ
Published 20 ಜುಲೈ 2019, 7:33 IST
Last Updated 20 ಜುಲೈ 2019, 7:33 IST
   

ಬೆಂಗಳೂರು:ವಿಶ್ವಾಸಮತ ಗೊತ್ತುವಳಿಯನ್ನು ಸೋಮವಾರ ನಡೆಸುವುದಾಗಿಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶನಿವಾರ ಹೇಳಿದ್ದಾರೆ.

ಸೋಮವಾರವೇ ವಿಶ್ವಾಸಮತ ಗೊತ್ತುವಳಿ ಮೇಲೆ ಮತದಾನ ನಡೆಯಲಿದೆ. ಮತ್ತೆ ಮುಂದೂಡುವ ಉದ್ದೇಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ ಅವರು ಜೆಡಿಎಸ್‌ ವಿಶ್ವಾಸಮತ ಯಾಚನೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ ಮೋರೆ ಹೋಗಿದೆ. ಒಂದು ವೇಳೆ ಅದರ ವಿಚಾರಣೆ ಮುಂದಕ್ಕೆ ಹೋದರೂ ನಾವು ಸೋಮವಾರವೇ ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕಲಿದ್ದೇವೆ ಎಂದು ಗುಂಡೂರಾವ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.