ADVERTISEMENT

ಯಾರು ಎಷ್ಟೇ ದೊಡ್ಡವರಾದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಕ್ರಮ: ರೆಹಮಾನ್ ಖಾನ್

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 9:27 IST
Last Updated 30 ಜೂನ್ 2022, 9:27 IST
   

ಬೆಂಗಳೂರು: 'ಯಾರೇ ಆದರೂ ಪಕ್ಷದ ನಾಯಕರ ಬಗ್ಗೆ ಲಘುವಾಗಿ ಮಾತನಾಡಬಾರದು. ಲಕ್ಷ್ಮೀ ನಾರಾಯಣ್ ಮತ್ತು ಎಂ.ಆರ್. ಸೀತಾರಾಂ ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ. ಆದಷ್ಟು ಬೇಗ ನೋಟಿಸ್ ಕೊಡುತ್ತೇವೆ' ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದರು.

'ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅಪ್ರಯೋಜಕರು' ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಲಕ್ಷ್ಮಿ ನಾರಾಯಣ್ ಹೇಳಿಕೆ ನೀಡಿದ್ದರು. ಬೆಂಬಲಿಗರ ಸಭೆ ನಡೆಸಿದ್ದ ಕೆಪಿಸಿಸಿ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಅವರು ಪಕ್ಷದ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದರು.

''ಸೀತಾರಾಂ ಅವರು ಸಭೆ ನಡೆಸಿ ನಾಯಕರ ಬಗ್ಗೆ ಮಾತನಾಡಿರುವುದು ಗಮನಕ್ಕೆ ಬಂದಿದೆ.‌ ಮೇಲ್ನೋಟಕ್ಕೆ ಇದು ಪಕ್ಷ ವಿರೋಧಿ ಚಟುವಟಿಕೆ. ಸೀತಾರಾಂ ಆಗಲಿ ಇಲ್ಲವೇ ಅವರಿಗಿಂತ ದೊಡ್ಡವರೇ ಆಗಲಿ, ಯಾರು ಎಷ್ಟೇ ದೊಡ್ಡವರಾದರೂ ಶಿಸ್ತುಕ್ರಮ ಕೈಗೊಳ್ಳುತ್ತೇವೆ' ಎಂದರು.

ADVERTISEMENT

'ಸೀತಾರಾಂ ನಡೆಸಿದ ಸಭೆಯಲ್ಲಿ ಹಲವರು ಭಾಗವಹಸಿದ್ದರು. ಶಾಸಕ ಸಂಗಮೇಶ್, ಪಕ್ಷದ ಕೆಲವು ಪದಾಧಿಕಾರಿಗಳು ಭಾಗವಹಿಸಿದ್ದರು. ಅವರೆಲ್ಲ ಆ ಸಭೆಯಲ್ಲಿ ಯಾಕೆ ಭಾಗವಹಿಸಿದ್ದರು.‌ ಈ ಬಗ್ಗೆ ಅವರಿಗೂ ನೋಟಿಸ್ ಕೊಡುತ್ತೇವೆ.‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ಶಿವಕುಮಾರ್ ದೆಹಲಿಯಲ್ಲಿದ್ದಾರೆ. ಅವರು ರಾಜ್ಯಕ್ಕೆ ವಾಪಸ್ಸಾದ ಬಳಿಕ ಚರ್ಚಿಸಿ ನೋಟಿಸ್ ಕೊಡುತ್ತೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.