ADVERTISEMENT

ರಾಜಕೀಯ ವಿದ್ಯಮಾನಗಳ ಬಗ್ಗೆ ರಾಹುಲ್‌ ಗಾಂಧಿ ಜತೆ ಚರ್ಚಿಸುವೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 30 ಜನವರಿ 2019, 10:26 IST
Last Updated 30 ಜನವರಿ 2019, 10:26 IST
   

ನವದೆಹಲಿ: 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಜೆ ಭೇಟಿ ಮಾಡಿ ರಾಜ್ಯ ರಾಜಕಿಯ ವಿದ್ಯಮಾನಗಳ ಕುರಿತು ಚರ್ಚಿಸುವೆ' ಎಂದು ಸರ್ಕಾರದ ಸಮನ್ವಯ ‌ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಮಧ್ಯಾಹ್ನ ಇಲ್ಲಿನ ಕರ್ನಾಟಕ ಭವನದಲ್ಲಿ ‌ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಿಧನರಾದ ಜಾರ್ಜ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ‌ನಮನ ಸಲ್ಲಿಸಿದ ಬಳಿಕ ರಾಹುಲ್‌ ಭೇಟಿಗೆ ತೆರಳುವುದಾಗಿ ಹೇಳಿದರು.

ಸರ್ಕಾರ ಸುಭದ್ರವಾಗಿದೆ. ಯಾವುದೇ ರೀತಿಯ ‌ಗೊಂದಲಗಳಿಲ್ಲ. ಒಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತ ಹೋದರೆ ಅದಕ್ಕೆ‌ ಅಂತ್ಯವೇ ಇರದು ಎಂದು ಅವರು ಅಭಿಪ್ರಾಯಪಟ್ಟರು.

ADVERTISEMENT

ಬಿಜೆಪಿಯವರು ಕಳೆದ ಎಂಟು ತಿಂಗಳಿಂದ ಆಪರೇಷನ್ ಮಾಡುವುದರಲ್ಲೇ ನಿರತರಾಗಿದ್ದಾರೆ. ಅವರಿಗೆ ಮಾಡಲು ಬೇರೆ ಕೆಲಸವಿಲ್ಲ ಎಂದು ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.