ಬೆಂಗಳೂರು: ನನ್ನ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಹೈಕೋರ್ಟ್ಗೆ ಧನ್ಯವಾದಗಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬುಧವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, ನಾನೇನೂ ತಪ್ಪು ಮಾಡಿಲ್ಲ, ಪಕ್ಷದ ಕೆಲಸ ಮಾಡಿದ್ದೇನೆ ಅಷ್ಟೇ. ಅದೇ ಕಾರಣಕ್ಕೆ ನನಗೆ ತೊಂದರೆ ನೀಡಿದ್ದಾರೆ. ಅದರ ಪರಿಣಾಮ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.
ಈ ಸಮಯದಲ್ಲಿ ಯಾರು ಏನು ಮಾತನಾಡಿದ್ದಾರೆ ಎಂಬುದನ್ನು ಗಮನಿಸಿದ್ದೇನೆ, ಎಲ್ಲರಿಗೂ ಒಳ್ಳೆಯದಾಗಲಿ. ಕಷ್ಟಕಾಲದಲ್ಲಿ ನನ್ನ ಜೊತೆ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಸದ್ಯ ನಿರಾಳ...
‘ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಿದ್ದ ಈ ಹಿಂದಿನ ರಾಜ್ಯ ಸರ್ಕಾರದ ಅನುಮತಿ ರದ್ದುಪಡಿಸಿದ ಈಗಿನ ರಾಜ್ಯ ಸರ್ಕಾರದ ಕ್ರಮಕ್ಕೆ ಅನುಗುಣವಾಗಿ ಪ್ರಕರಣದ ಆರೋಪಿಯೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇದ್ದ ರಿಟ್ ಅರ್ಜಿ ಮತ್ತು ಈ ಸಂಬಂಧದ ಮೇಲ್ಮನವಿಯನ್ನು ಹಿಂಪಡೆದಿದ್ದಾರೆ. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೆಮೊ ಪರಿಗಣಿಸಿ ಅರ್ಜಿ ಹಿಂಪಡೆಯುವ ನಿರ್ಧಾರಕ್ಕೆ ಅಸ್ತು ಎಂದು ಆದೇಶಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.