ADVERTISEMENT

ಡಿ.ಕೆ.ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ : ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 8:13 IST
Last Updated 4 ಸೆಪ್ಟೆಂಬರ್ 2019, 8:13 IST
   

ನವದೆಹಲಿ : ಡಿ.ಕೆ.ಶಿವಕುಮಾರ್ಬಂಧಿಸಿದ್ದು ರಾಜಕೀಯ ಪ್ರೇರಿತ ಎಂದು ರಾಮಲಿಂಗಾರೆಡ್ಡಿಯವರು ಹೇಳಿದ್ದಾರೆ.

ದೆಹಲಿಯರಾಮ ಮನೋಹರ ಲೋಹಿಯಾ ಆಸ್ಪತ್ರೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸರ್ಕಾರದ ಆಸ್ತಿಪಾಸ್ತಿ ನಷ್ಟ ಮಾಡುವುದು ಸರಿಯಲ್ಲಪಕ್ಷದ ಮುಖಂಡರೂಮತ್ತು ಕಾರ್ಯಕರ್ತರಲ್ಲಿ ಶಾಂತಿಯುತ ರೀತಿಯಲ್ಲಿ ಪ್ರತಿಭಟಿಸುವಂತೆ ಕೇಳಿಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ ಅವರು ನಾವು ಮೊದಲಿನಿಂದಲೂ ಹೇಳ್ತಿದ್ದೀವಿ. ಈಗಲೂ ಅದೇ ನಿಲುವನ್ನು ಪುನರುಚ್ಚರಿಸುತ್ತಿರುವುದಾಗಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.