ಬೆಂಗಳೂರು:ಎಂಟಿಬಿ ನಾಗರಾಜ್ ಜೊತೆಗೆ ಸುದೀರ್ಘ ಮಾತುಕತೆಯ ನಂತರ ಸಂತೃಪ್ತ ಭಾವದಲ್ಲಿ ಮಾಧ್ಯಮಗಳ ಎದುರು ಬಂದು ನಿಂತ ಸಚಿವ ಡಿ.ಕೆ.ಶಿವಕುಮಾರ್, ‘ಸತತ 40 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಎಂಟಿಬಿ ನಾಗರಾಜ್ ತುಂಬಾ ಕಷ್ಟದ ಸಂದರ್ಭಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಕಾಪಾಡಿದ್ದಾರೆ. ನಾವು ಸದಾ ಜೊತೆಗಿರೋಣ, ಜೊತೆಗೆ ಸಾಯೋಣ. ಹಳೆಯದನ್ನು ಮರೆತುಒಗ್ಗಟ್ಟಿನಿಂದ ಮುನ್ನಡೆಯುವತೀರ್ಮಾನ ಮಾಡಿದ್ದೇವೆ’ ಎಂದು ಹೇಳಿದರು.
‘ಸರ್ಕಾರದ ಬಗ್ಗೆ ಅವರಿಗಿರುವಭಿನ್ನಾಭಿಪ್ರಾಯಗಳನ್ನು ನಮ್ಮೊಡನೆ ಹೇಳಿಕೊಂಡಿದ್ದಾರೆ. ಅವರಿಗೆ ಸ್ಪಂದಿಸುವ ಜವಾಬ್ದಾರಿಯನ್ನುನಾನು ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತೆಗೆದುಕೊಂಡಿದ್ದೇವೆ.ಸುಧಾಕರ ಅವರನ್ನು ಸಿದ್ದರಾಮಯ್ಯ ಅವರೊಂದಿಗೆ ಭೇಟಿ ಮಾಡಿಸುವುದಾಗಿ ಎಂಟಿಬಿ ಮಾತು ಕೊಟ್ಟಿದ್ದಾರೆ. ಹಳೆಯ ಕೆಟ್ಟಗಳಿಗೆ ಮರೆತು ಮುಂದೆ ಕೆಲಸ ಮಾಡುತ್ತೇವೆ’ ಎಂದು ಡಿ.ಕೆ.ಶಿವಕುಮಾರ್ ನುಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.