ADVERTISEMENT

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಫೋಟೊ ಫ್ರೆಂಡ್ಸ್: ಸಾರಿಗೆ ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 11:06 IST
Last Updated 29 ಆಗಸ್ಟ್ 2021, 11:06 IST
ಸಾರಿಗೆ ಸಚಿವ ಶ್ರೀರಾಮುಲು
ಸಾರಿಗೆ ಸಚಿವ ಶ್ರೀರಾಮುಲು   

ಹುಬ್ಬಳ್ಳಿ: 'ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ದೆಹಲಿಗೆ ಹೋದಾಗ ಮಾತ್ರ ಸ್ನೇಹಿತರಂತೆ ಇರುತ್ತಾರೆ. ರಾಜ್ಯಕ್ಕೆ ಮರಳಿದಾಗ ಮುಖ್ಯಮಂತ್ರಿ ಸ್ಥಾನದ ಪೈಪೋಟಿಯಲ್ಲಿ ಇರುತ್ತಾರೆ' ಎಂದು ಸಾರಿಗೆ ಸಚಿವ ಶ್ರೀರಾಮುಲು ಟೀಕಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಡಿಕೆಶಿ, ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎದುರು ಮಾತ್ರ ಕೈ ಕುಲುಕುತ್ತಾರೆ. ಅವರ ಎದುರಿಗೆ ಫೋಟೊ ಫ್ರೆಂಡ್ಸ್ ಆಗಿರುವ ಇವರು, ಹೊರಗೆ ಬಂದಾಗ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹಗಲು ಕನಸು ಕಾಣುತ್ತಾರೆ. 2023ರ ವಿಧಾನ ಸಭೆ ಚುನಾವಣೆಯಲ್ಲೂ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ' ಎಂದರು.

'ನಷ್ಟದಲ್ಲಿರುವ ಸಾರಿಗೆ ಇಲಾಖೆಯನ್ನು ಲಾಭದತ್ತ ಕೊಂಡೊಯ್ಯಲು ಕೆಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ತೈಲ ಬೆಲೆ ಏರಿಕೆಯಾಗುತ್ತಿರುವ ಈ ಸಂದರ್ಭದಲ್ಲಿ ಇಲೆಕ್ಟ್ರಿಕ್ ಬಸ್ ಓಡಿಸಿದರೆ ಹೇಗೆ ಎನ್ನುವ ಕುರಿತು ಸಹ ಮುಖ್ಯಮಂತ್ರಿ ಹಾಗೂ ಕೇಂದ್ರದ ಜೊತೆ ಚರ್ಚಿಸಲಾಗಿದೆ. ಕೆಲವು ಲಾಭದಾಯಕ ದೂರದ ಪ್ರದೇಶಗಳಿಗೆ ಖಾಸಗಿ ಬಸ್‌ಗಳು ಸಂಚಾರಿಸುತ್ತಿದ್ದು, ಅವುಗಳ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುವುದು' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.