ADVERTISEMENT

ಸಿಎಂ ಬದಲಾದರೂ ಆಡಳಿತದಲ್ಲಿ ಸುಧಾರಣೆ ಕಾಣುತ್ತಿಲ್ಲ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 15:46 IST
Last Updated 14 ಅಕ್ಟೋಬರ್ 2021, 15:46 IST
ಡಿ.ಕೆ.ಶಿವಕುಮಾರ
ಡಿ.ಕೆ.ಶಿವಕುಮಾರ   

ಚಿತ್ರದುರ್ಗ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದರೂ ಆಡಳಿತ ಸುಧಾರಣೆ ಕಂಡಿಲ್ಲ. ರಾಜ್ಯದಲ್ಲಿ ಏನೂ ಬದಲಾವಣೆ ಆಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಜನವಿರೋಧಿ ನೀತಿಯಿಂದ ಜನ ಭ್ರಮನಿರಸನಗೊಂಡಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ಗಗನಕ್ಕೆ ಏರಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನರು ಕೋಪ - ತಾಪ ತೀರಿಸಿಕೊಳ್ಳಲು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಿದರು.

'ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸ‌ವಿದೆ. ಯುವಕರು, ರೈತರು, ವರ್ತಕರಿಗೆ ಬಿಜೆಪಿ ಆಡಳಿತದಲ್ಲಿ ಅನ್ಯಾಯವಾಗಿದೆ' ಎಂದು ಆರೋಪಿಸಿದರು. ಕಾಂಗ್ರೆಸಿನ ಒಳಜಗಳದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್ ಉತ್ತರಿಸಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.