ADVERTISEMENT

ಸಿ.ಟಿ ರವಿಗೆ ಪಿತೃವಿಯೋಗ: ಡಿ.ಕೆ. ಶಿವಕುಮಾರ್‌ ಸಾಂತ್ವನ

​ಪ್ರಜಾವಾಣಿ ವಾರ್ತೆ
Published 29 ಜನವರಿ 2022, 12:55 IST
Last Updated 29 ಜನವರಿ 2022, 12:55 IST
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸಿ.ಟಿ ರವಿ, ಡಿ.ಕೆ ಶಿವಕುಮಾರ್‌ ಮುಖಾಮುಖಿ
ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಸಿ.ಟಿ ರವಿ, ಡಿ.ಕೆ ಶಿವಕುಮಾರ್‌ ಮುಖಾಮುಖಿ    

ಬೆಂಗಳೂರು: ಪಿತೃ ವಿಯೋಗಕ್ಕೆ ಒಳಗಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಸಾಂತ್ವನ ಹೇಳಿದರು.

ಡಿ.ಕೆ. ಶಿವಕುಮಾರ್ ಅವರು ಗೋವಾದಲ್ಲಿ ಚುನಾವಣೆ ಪ್ರಚಾರ ಮುಗಿಸಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಸಿ.ಟಿ. ರವಿ ಅವರು ಎದುರಾದರು.

ಶಾಸಕ ಸಿ.ಟಿ.ರವಿ ಅವರ ತಂದೆ ಸಿ.ಇ.ತಿಮ್ಮೇಗೌಡ (92) ಬೆಂಗಳೂರಿನಲ್ಲಿ ಶನಿವಾರ ನಿಧನರಾದರು. ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರು ಕೃಷಿಕರು.

ADVERTISEMENT

ಆಲ್ದೂರು ಸಮೀಪದ ತೋಟದಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.